ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ಕಥೆ ಆಧಾರಿತ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ದೊಡ್ಡ ಯಶಸ್ಸು ಕಂಡಿದೆ ವಿಮರ್ಶಕರ ಟೀಕೆಗಳ ಹೊರತಾಗಿಯೂ, ಬಹುಪಾಲು ಚಲನಚಿತ್ರ ಗಣ್ಯರು ಮತ್ತು ಪ್ರೇಕ್ಷಕರು ಚಿತ್ರವನ್ನು ನಿರ್ಮಿಸಿದ ನಿರ್ದೇಶಕ ಮತ್ತು ನಿರ್ಮಾಪಕರ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿರುತ್ತಾರೆ. ಈ ನಿಟ್ಟಿನಲ್ಲಿ ತೆಲಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ಮಾಪಕರನ್ನು ಹೊಗಳಿದ್ದಾರೆ. ಪ್ರಮುಖ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾತ್ಮಕ ದಂಗೆ, ಗಲಭೆಗಳು ಮತ್ತು ಕಾಶ್ಮೀರಿ ಹಿಂದೂಗಳ ಮೇಲಿನ ದಾಳಿ ದೌರ್ಜನ್ಯಗಳ ಕುರಿತಾಗಿ “ದಿ ಕಾಶ್ಮೀರ್ ಫೈಲ್ಸ್” ಎಂಬ ಚಲನಚಿತ್ರ ನಿರ್ಮಾಣ ಮಾಡಿದ್ದು ಇದರ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆಗೂಡಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದರು ಈ ಸಂದರ್ಭದಲ್ಲಿ ಚಿತ್ರದ ಅದ್ಧೂರಿ ಯಶಸ್ಸಿಗೆ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರನ್ನು ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



