ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ಕಥೆ ಆಧಾರಿತ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ದೊಡ್ಡ ಯಶಸ್ಸು ಕಂಡಿದೆ ವಿಮರ್ಶಕರ ಟೀಕೆಗಳ ಹೊರತಾಗಿಯೂ, ಬಹುಪಾಲು ಚಲನಚಿತ್ರ ಗಣ್ಯರು ಮತ್ತು ಪ್ರೇಕ್ಷಕರು ಚಿತ್ರವನ್ನು ನಿರ್ಮಿಸಿದ ನಿರ್ದೇಶಕ ಮತ್ತು ನಿರ್ಮಾಪಕರ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿರುತ್ತಾರೆ. ಈ ನಿಟ್ಟಿನಲ್ಲಿ ತೆಲಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ಮಾಪಕರನ್ನು ಹೊಗಳಿದ್ದಾರೆ. ಪ್ರಮುಖ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾತ್ಮಕ ದಂಗೆ, ಗಲಭೆಗಳು ಮತ್ತು ಕಾಶ್ಮೀರಿ ಹಿಂದೂಗಳ ಮೇಲಿನ ದಾಳಿ ದೌರ್ಜನ್ಯಗಳ ಕುರಿತಾಗಿ “ದಿ ಕಾಶ್ಮೀರ್ ಫೈಲ್ಸ್” ಎಂಬ ಚಲನಚಿತ್ರ ನಿರ್ಮಾಣ ಮಾಡಿದ್ದು ಇದರ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆಗೂಡಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದರು ಈ ಸಂದರ್ಭದಲ್ಲಿ ಚಿತ್ರದ ಅದ್ಧೂರಿ ಯಶಸ್ಸಿಗೆ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರನ್ನು ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27