ಶ್ರೀನಿವಾಸಪುರ:ಕನಾ೯ಟಕ ರಾಜ್ಯ ದೇವಗಾಣಿಗ,ಓಂಟೆತ್ತು ಗಾಣಿಗರ ಸಂಘದ ರಾಜ್ಯ ಮಟ್ಟದ ಸಮಾವೇಶ ಡಿಸೆಂಬರ್ 18 ರಂದು ಬೆಂಗಳೂರಿನಲ್ಲಿ ನಡೆಯಲಿರುವುದಾಗಿ ಈ ಸಮಾವೇಶಕ್ಕೆ ತಾಲೂಕಿನಲ್ಲಿರುವ ದೇವಗಾಣಿಗ ಮತ್ತು ಓಂಟೆತ್ತು ಗಾಣಿಗರ ಕುಲಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕನಾ೯ಟಕ ರಾಜ್ಯ ದೇವಗಾಣಿಗರ ಸಂಘದ ಅಧ್ಯಕ್ಷ ಕುರುಬೂರು ರಮೇಶ್ ಹೇಳಿದರು ಅವರು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಗಾಣಿಗರ ಸಂಘದ ರಾಜ್ಯ ಮಟ್ಟದ ಸಮಾವೇಶ ಸಂಬಂಧ ಆಯೋಜಿಸಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಗಾಣಿಗ ಸಮುದಾಯಗಳ ಜನತೆ ಸಂಘಟಿತರಾಗಬೇಕಿದೆ ಸರ್ಕಾರದ ಮೀಸಲಾತಿ ಪಟ್ಟಿಯಲ್ಲಿ ನಮ್ಮ ಸಮಾಜದ ಹೆಸರು ಗಾಂಡ್ಲ ಎಂದು ನಮೂದಾಗಿದೆ ಇದನ್ನು ಸರ್ಕಾರ ತೀವ್ರವಾಗಿ ಪರಿಗಣಿಸಿ ದೇವಗಾಣಿಗ ಹಾಗು ಒಂಟೆತ್ತು ಗಾಣಿಗ ಎಂದು ನಮೂದಿಸಿ ಮೀಸಲಾತಿ 2 ಉಪಜಾತಿಯಾಗಿ ನಮೂದಿಸಬೇಕೆದೆ ಗಾಣಿಗ ಅಭಿವೃದ್ದಿ ನಿಗಮ ಸ್ಥಾಪಿಸುವ ಮೂಲಕ ಸಮಾಜದ ಅಭಿವೃದ್ದಿಗೆ ಸರ್ಕಾರ ಮುಂದಾಗಬೇಕು ಈ ಸಮಾವೇಶದಲ್ಲಿ ದೇವ ಜ್ಯೋತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಾರಂಭ ಮಾಡಲಾಗುತ್ತದೆ ಹಾಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮುಖಂಡ LIC ಶ್ರೀನಿವಾಸನ್ ಮಾತನಾಡಿ ಸಮುದಾಯದ ಸಂಘಟನೆಗಾಗಿ ಮಾಡುತ್ತಿರುವ ಶಕ್ತಿ ತುಂಬುವ ಸಲುವಾಗಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಕುಲಬಾಂದವರು ರಾಜ್ಯಮಟ್ಟದ ಸಂಘದಲ್ಲಿ ಸದಸ್ಯತ್ವ ಪಡೆದು ಸಮಾವೇಶಕ್ಕೆ ಹೋಗಬೇಕಿದೆ ಎಂದರು. ಈ ಸಂದರ್ಭದಲ್ಲಿ ಕಾಯ೯ದಶಿ೯ ಸದಾಶಿವಪ್ಪ ಅಗರಂ ರವಣಪ್ಪ, ಮುರುಳಿ ಜೆ,ಮುನಿರಾಜು, ನಾರಾಯಣಶೆಟ್ಟಿ, ಶೆಟ್ಟಿಹಳ್ಳಿ ರಾಮಚಂದ್ರಪ್ಪ, ಕೊಳತೂರು ನಾಗೇಂದ್ರ, ಲಕ್ಷ್ಮೀಪುರ ವೆಂಕಟೇಶ, ತಾಡಿಗೋಳ್ ನಾಗೇಶ್, ಮಿಲ್ಟ್ರಿರಾಮಕೃಷ್ಣಪ್ಪ,ಕದಿರೋಳ್ಳ ಗಡ್ಡ ವೆಂಕಟರವಣಪ್ಪ ಮುಂತಾದವರು ಭಾಗವಹಿಸಿದ್ಧರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



