ಶ್ರೀನಿವಾಸಪುರ; ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆರು ಭಾರಿ ಶಾಸಕರಾಗಿ ಎರಡು ಭಾರಿ ಸ್ಪೀಕರ್ ಆಗಿ ಒಮ್ಮೆ ಸಚಿವರಾಗಿ ಸದಾ ಮೇಧಾವಿಯಂತೆ ಮಾತನಾಡುವ ರಾಜಕಾರಣಿ ಮಹಿಳೆಯರ ಕುರಿತಾಗಿ ಅವರಾಡಿರುವ ಮಾತು ಮಹಿಳೆಯರು ನೂವು ಉಣ್ಣುವಂತಾಗಿದೆ ಹಾಗೇ ತಾಲ್ಲೂಕಿನ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಆರೋಪಿಸಿದರು.
ಶ್ರೀನಿವಾಸಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಮೇಶ್ ಕುಮಾರ್ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಹಿಳೆಯರ ಬಗ್ಗೆ ಇಷ್ಟೊಂದು ಲಘುವಾಗಿ ಮಾತನಾಡುವರು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಿ ರಾಜಕೀಯ ವಿಶ್ರಾಂತಿ ಪಡೆಯಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾವೇಣು ಮಾತನಾಡಿ ಇತ್ತೀಚೆಗೆ ರಮೇಶ್ ಕುಮಾರ್ ಸದನದಲ್ಲಿ ಮಾತನಾಡುವಾಗ ನೈತಿಕ ಮೌಲ್ಯಗಳನ್ನು ಕಳೆದುಕೊಂಡು ಮಾತನಾಡುತ್ತ ಮಹಿಳೆಯರನ್ನು ಅಪಮಾನ ಮಾಡಿರುವುದು ಮಹಿಳಾಲೋಕ ಕಳಂಕ ಎದುರಿಸುವಂತಾಗಿದೆ.
ಮಹಿಳೆಯರ ಬಗ್ಗೆ ಅಗೌರವವಾಗಿ ನಡೆದುಕೊಳ್ಳುವವರಿಗೆ ಕಾನೂನು ಆ ಪದದ ಬಗ್ಗೆ ಮಾತನಾಡುವವರ ಮೇಲೂ ಅನ್ವಯಿಸುವಂತೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಾಗಬೇಕು ಎಂದು ಒತ್ತಾಯಿಸಿದರು.ರ್ಯಾಲಿಯಲ್ಲಿ ಜಿಲ್ಲಾ ವಕ್ತಾರ ಮುನಿವೆಂಕಟಪ್ಪ, ತಾಲ್ಲೂಕು ಅಧ್ಯಕ್ಷ ಅಶೋಕ್ ರೆಡ್ಡಿ, ಕಾರ್ಯದರ್ಶಿ ಶಿವಶಂಕರಗೌಡ ಪುರಸಭೆ ಸದಸ್ಯ ರಾಮಾಂಜಿ,ರಮೇಶ್,ಶಫಿ ಮಹಿಳಾ ಮೋರ್ಚಾ ಮುಖಂಡರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27