ಶ್ರೀನಿವಾಸಪುರ; ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆರು ಭಾರಿ ಶಾಸಕರಾಗಿ ಎರಡು ಭಾರಿ ಸ್ಪೀಕರ್ ಆಗಿ ಒಮ್ಮೆ ಸಚಿವರಾಗಿ ಸದಾ ಮೇಧಾವಿಯಂತೆ ಮಾತನಾಡುವ ರಾಜಕಾರಣಿ ಮಹಿಳೆಯರ ಕುರಿತಾಗಿ ಅವರಾಡಿರುವ ಮಾತು ಮಹಿಳೆಯರು ನೂವು ಉಣ್ಣುವಂತಾಗಿದೆ ಹಾಗೇ ತಾಲ್ಲೂಕಿನ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಆರೋಪಿಸಿದರು.
ಶ್ರೀನಿವಾಸಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಮೇಶ್ ಕುಮಾರ್ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಹಿಳೆಯರ ಬಗ್ಗೆ ಇಷ್ಟೊಂದು ಲಘುವಾಗಿ ಮಾತನಾಡುವರು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಿ ರಾಜಕೀಯ ವಿಶ್ರಾಂತಿ ಪಡೆಯಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾವೇಣು ಮಾತನಾಡಿ ಇತ್ತೀಚೆಗೆ ರಮೇಶ್ ಕುಮಾರ್ ಸದನದಲ್ಲಿ ಮಾತನಾಡುವಾಗ ನೈತಿಕ ಮೌಲ್ಯಗಳನ್ನು ಕಳೆದುಕೊಂಡು ಮಾತನಾಡುತ್ತ ಮಹಿಳೆಯರನ್ನು ಅಪಮಾನ ಮಾಡಿರುವುದು ಮಹಿಳಾಲೋಕ ಕಳಂಕ ಎದುರಿಸುವಂತಾಗಿದೆ.
ಮಹಿಳೆಯರ ಬಗ್ಗೆ ಅಗೌರವವಾಗಿ ನಡೆದುಕೊಳ್ಳುವವರಿಗೆ ಕಾನೂನು ಆ ಪದದ ಬಗ್ಗೆ ಮಾತನಾಡುವವರ ಮೇಲೂ ಅನ್ವಯಿಸುವಂತೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಾಗಬೇಕು ಎಂದು ಒತ್ತಾಯಿಸಿದರು.ರ್ಯಾಲಿಯಲ್ಲಿ ಜಿಲ್ಲಾ ವಕ್ತಾರ ಮುನಿವೆಂಕಟಪ್ಪ, ತಾಲ್ಲೂಕು ಅಧ್ಯಕ್ಷ ಅಶೋಕ್ ರೆಡ್ಡಿ, ಕಾರ್ಯದರ್ಶಿ ಶಿವಶಂಕರಗೌಡ ಪುರಸಭೆ ಸದಸ್ಯ ರಾಮಾಂಜಿ,ರಮೇಶ್,ಶಫಿ ಮಹಿಳಾ ಮೋರ್ಚಾ ಮುಖಂಡರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



