ಶ್ರೀನಿವಾಸಪುರ; ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆರು ಭಾರಿ ಶಾಸಕರಾಗಿ ಎರಡು ಭಾರಿ ಸ್ಪೀಕರ್ ಆಗಿ ಒಮ್ಮೆ ಸಚಿವರಾಗಿ ಸದಾ ಮೇಧಾವಿಯಂತೆ ಮಾತನಾಡುವ ರಾಜಕಾರಣಿ ಮಹಿಳೆಯರ ಕುರಿತಾಗಿ ಅವರಾಡಿರುವ ಮಾತು ಮಹಿಳೆಯರು ನೂವು ಉಣ್ಣುವಂತಾಗಿದೆ ಹಾಗೇ ತಾಲ್ಲೂಕಿನ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಆರೋಪಿಸಿದರು.
ಶ್ರೀನಿವಾಸಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಮೇಶ್ ಕುಮಾರ್ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಹಿಳೆಯರ ಬಗ್ಗೆ ಇಷ್ಟೊಂದು ಲಘುವಾಗಿ ಮಾತನಾಡುವರು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಿ ರಾಜಕೀಯ ವಿಶ್ರಾಂತಿ ಪಡೆಯಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾವೇಣು ಮಾತನಾಡಿ ಇತ್ತೀಚೆಗೆ ರಮೇಶ್ ಕುಮಾರ್ ಸದನದಲ್ಲಿ ಮಾತನಾಡುವಾಗ ನೈತಿಕ ಮೌಲ್ಯಗಳನ್ನು ಕಳೆದುಕೊಂಡು ಮಾತನಾಡುತ್ತ ಮಹಿಳೆಯರನ್ನು ಅಪಮಾನ ಮಾಡಿರುವುದು ಮಹಿಳಾಲೋಕ ಕಳಂಕ ಎದುರಿಸುವಂತಾಗಿದೆ.
ಮಹಿಳೆಯರ ಬಗ್ಗೆ ಅಗೌರವವಾಗಿ ನಡೆದುಕೊಳ್ಳುವವರಿಗೆ ಕಾನೂನು ಆ ಪದದ ಬಗ್ಗೆ ಮಾತನಾಡುವವರ ಮೇಲೂ ಅನ್ವಯಿಸುವಂತೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಾಗಬೇಕು ಎಂದು ಒತ್ತಾಯಿಸಿದರು.ರ್ಯಾಲಿಯಲ್ಲಿ ಜಿಲ್ಲಾ ವಕ್ತಾರ ಮುನಿವೆಂಕಟಪ್ಪ, ತಾಲ್ಲೂಕು ಅಧ್ಯಕ್ಷ ಅಶೋಕ್ ರೆಡ್ಡಿ, ಕಾರ್ಯದರ್ಶಿ ಶಿವಶಂಕರಗೌಡ ಪುರಸಭೆ ಸದಸ್ಯ ರಾಮಾಂಜಿ,ರಮೇಶ್,ಶಫಿ ಮಹಿಳಾ ಮೋರ್ಚಾ ಮುಖಂಡರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



