ಶ್ರೀನಿವಾಸಪುರ: ರಥಸಪ್ತಮಿ ದಿನದಂದು ಸೂರ್ಯೋದಯಕ್ಕೂ ಮುನ್ನ ಶೂಚಿರಭೂತರಾಗಿ ಸೂರ್ಯ ನಮಸ್ಕಾರ ಮಾಡಿದರೆ ಮಾನಸಿಕ ನೆಮ್ಮದಿ ಮಾನಸಿಕ ದೈಹಿಕ ಸಮತೋಲನ ವೃದ್ಧಿಯಾಗುತ್ತದೆ ಕಾಯಿಲೆಗಳಿಂದ ದೂರವಾಗಿರುತ್ತಾರೆ ಎಂದು ಯೋಗಗುರು ಚೌಡಪ್ಪ ಹೇಳಿದರು.
ಅವರು ಪಟ್ಟಣದ ತ್ಯಾಗರಾಜ ಬಡಾವಣೆಯಲ್ಲಿನ ಯೋಗ ಮಂದಿರದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಥಸಪ್ತಮಿ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರದಲ್ಲಿ ಪಾಲ್ಗೊಂಡು ಮಾತನಾಡಿದರು.
ಸೂರ್ಯ ಭಗವಾನನ ಜನುದಿನವಾಗಿ ರಥಸಪ್ತಮಿಯನ್ನು ಆಚರಿಸುವುದು ನಮ್ಮ ಸಂಪ್ರದಾಯ ಸಂಕ್ರಾಂತಿಗೆ ದಕ್ಷಿಣಾಯನದಿಂದ ಉತ್ತರಾಯಣ ಕಡೆ ಪ್ರಯಾಣಿಸುವ ಸೂರ್ಯ ಸಂಪೂರ್ಣ ಉತ್ತರ ದಿಕ್ಕಿಗೆ ತಿರುಗುತ್ತಾನೆ. ಕೊಟ್ಯಾನು ಕೋಟಿ ದೇವತೆಗಳು ಸೂರ್ಯನ ಪತ ಸಂಚಲನಕ್ಕೆ ಸಾಕ್ಷೀಭೂತರಾಗಿರುತ್ತಾರೆಂದು ಪ್ರಕೃತಿ ಪರಂಪರೆ ಸಾರುತ್ತದೆ.
ಪತ ಸಂಚಲನ ಬದಲಾವಣೆಯಿಂದ ಕೇವಲ ಆಧ್ಯಾತ್ಮಿಕವಾದವಷ್ಟೆ ಅಲ್ಲ ಪ್ರಾಕೃತಿಕವಾಗಿ ಪರಿಸರಸದ ಮೇಲು ಬದಲಾವಣೆ ಕಾಣಬಹುದಾಗಿದೆ ಸೂರ್ಯನ ಪ್ರಖರತೆ ಹೆಚ್ಚುತ್ತದೆ ಮರಗಿಡ ಸಸ್ಯ ಶ್ಯಾಮಲದ ಮೇಲೆ ಪರಿಣಾಮ ಬೀರುತ್ತದೆ ಪ್ರಕೃತಿಯಲ್ಲಿ ಹಲವಾರು ರೀತಿಯ ಬದಲಾವಣೆಗಳನ್ನು ಕಾಣಸಿಗುತ್ತದೆ ಜೊತೆಗೆ ಮನುಷ್ಯರಿಗೆ ದೈಹಿಕ ಕಾಯಿಲೆಗಳು ದೂರವಾಗಲು ಸೂರ್ಯಕಿರಣಗಳು ಶಕ್ತಿ ನೀಡುತ್ತದೆ. ಬೀಜ ಮಂತ್ರಗಳೊಂದಿಗೆ 108 ಸೂರ್ಯ ನಮಸ್ಕಾರ ಮಾಡುವುದರಿಂದ ಆಧ್ಯಾತ್ಮಿಕವಾಗಿ ದೈಹಿಕ ಬದಲಾವಣೆ ಕಾಣಬಹುದಾಗಿರುತ್ತದೆ ಮಾನಸಿಕ ಸ್ಮರಣೆಯ ಶಕ್ತಿ ಹಾಗು ದೇಹಕ್ಕೆ ರೋಗ ನಿರೂದಕ ಶಕ್ತಿ ಹೆಚ್ಚುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೋಗ ಶಿಕ್ಷಕ ರವಿಕುಮಾರ್ ಮಾತನಾಡಿ ತಂತ್ರಜ್ಞಾನ ಬೆಳೆದಂತೆ ದೈಹಿಕ ಚಟುವಟಿಕೆಗಳು ಕಡಿಮೆಯಾಗುತ್ತಿದೆ ಒತ್ತಡಗಳಿಂದ ನಲುಗುತ್ತಿರುವ ಜನತೆಗೆ ಸೂರ್ಯ ನಮಸ್ಕಾರ, ಯೋಗಾಭ್ಯಾಸ ಪ್ರಾಣಾಯಾಮ ಕಲಿತು ಮಾನಸಿಕ ದೈಹಿಕ ಒತ್ತಡಗಳು ದೂರ ಮಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಒತ್ತು ಕೊಡಬೇಕೆಂದರು.
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ, ಯೋಗ ಶಿಕ್ಷಕ ವೆಂಕಟರವಣಪ್ಪ ಬಾಬುರೆಡ್ಡಿ,ಉಪೇಂದ್ರ,ರಮೇಶರೆಡ್ಡಿ, ಕುಬೇರಗೌಡ, ವಾಸವಿರವಿಕುಮಾರ್,ಉಷಾದೇವಿ ಮುಂತಾದವರಿ ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27