ತಿರುಪತಿ:ದಕ್ಷಿಣ ಭಾರತದ ಪ್ರಖ್ಯಾತ ರಾಹು-ಕೇತು ಪೂಜೆ ನಡೆಯುವ ಆಂಧ್ರದ ಶ್ರೀಕಾಳಹಸ್ತೀಶ್ವರ ದೇವಾಲಯದಲ್ಲಿ ಭಾನುವಾರ ನಡೆದಂತ ರಾಹು-ಕೇತು ಪೂಜೆಗಳು ಸಾರ್ವಕಾಲಿಕ ದಾಖಲೆಯಾಗಿದೆ.
ದೇವಸ್ಥಾನದಲ್ಲಿ ಐದು ವಿವಿಧ ಧರದ ಟಿಕೆಟ್ ಗಳಲ್ಲಿ ರಾಹು-ಕೇತು ಸರ್ಪದೋಷ ನಿವಾರಣಾ ಪೂಜೆಗಳು ನಡೆಯುತ್ತವೆ ರಾಹು-ಕೇತು ಪೂಜೆಗಳ ದಾಖಲೆ
ರಾಹು-ಕೇತು ಪೂಜಾ ಟಿಕೆಟ್ ಗಳು ಭಾನುವಾರ ಒಂದೇ ದಿನ 9,168 ಟಿಕೆಟ್ಗಳು ಮಾರಾಟವಾಗಿವೆ. 14 ತಿಂಗಳ ಹಿಂದೆ ಐದು ವಿಭಾಗಗಳಲ್ಲಿ ದಾಖಲೆಯ 7,200 ಟಿಕೆಟ್ಗಳು ಮಾರಾಟವಾಗಿದ್ದು, ಆಷಾಢ ಮಾಸದ ಭಾನುವಾರ ಅಮಾವಾಸ್ಯೆ ಬಂದಿದ್ದರಿಂದ ಜನತೆ ದೇವಾಲಯದಲ್ಲಿ ಪೂಜೆ ಮಾಡಲು ಮುಗಿಬಿದಿದ್ದು ಒಂದೇ ದಿನ 9,168 ರಾಹುಕೇತು ಪೂಜೆಯ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ನಿರ್ಮಿಸಿದೆ. ಶ್ರೀಕಾಳಹಸ್ತೀಶ್ವರ ದೇವಸ್ಥಾನದ ರಾಹುಕೇತು ಮಂಟಪಗಳು ಬೆಳಗ್ಗೆಯಿಂದ ಸಂಜೆಯವರೆಗೆ ಭಕ್ತರಿಂದ ತುಂಬಿ ತುಳುಕಾಡುತಿತ್ತು 5,000 ರೂ ಮೊತ್ತದ 154 ಟಿಕೆಟ್ ಗಳು,2,500 ರೂ ಮೊತ್ತದ 610ಟಿಕೆಟ್ ಗಳು,1,500 ರೂ ಮೊತ್ತದ 933ಟಿಕೆಟ್ ಗಳು,750 ರೂ ಮೊತ್ತದ 2,288 ಟಿಕೆಟ್ ಗಳು,500 ರೂ ಮೊತ್ತದ 5,183ಟಿಕೆಟ್ ಗಳು,,. ಸೇರಿ ಒಟ್ಟು 9,168 ರಾಹುಕೇತು ಪೂಜಾ ಟಿಕೆಟಗಳು ಮಾರಾಟವಾಗಿದೆ ಎನ್ನುತ್ತಾರೆ ದೇವಾಲಯದ ಇವಿಒಎಸ್ ಎನ್ ಮೂರ್ತಿ.
ಇದಲ್ಲದೆ, ಐದು ಬಗೆಯ ಪ್ರಸಾದಗಳ 29,505 ಪ್ಯಾಕೆಟ್ಗಳು ಮಾರಾಟವಾಗಿದ್ದು, ಇದು ಸಹ ದಾಖಲೆಯ ಮಾರಾಟ ಎನ್ನುತ್ತಾರೆ ಭಾನುವಾರವಷ್ಟೇ ದೇವಸ್ಥಾನಕ್ಕೆ ವಿವಿಧ ಪೂಜೆ, ಸೇವಾ ಟಿಕೆಟ್ ಗಳ ಮೂಲಕ ಸುಮಾರು ಎರಡು ಕೋಟಿ ಅದಾಯ ಬಂದಿದೆ ಎನ್ನುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



