ಹಾಸನ :ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಲು ವಿನೂತನ ಹಾಗು ಅಪಾಯಕಾರಿ ರೀಲ್ಸ್Reels ಮಾಡುವ ಹುಚ್ಚಿನಲ್ಲಿ ಬಿದ್ದಿರುವ ಕೆಲ ಯುವಕರು ಹುಚ್ಚಾಟದಿಂದ ತಮ್ಮ ಜೀವ ಕಳೆದುಕೊಳ್ಳುತ್ತಿದ್ದಾರೆ.
ಇಂತಹುದೆ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು ರೀಲ್ಸ್ ಮಾಡಲು ಹೋಗಿ ಬೆಟ್ಟದ ಪ್ರಪಾತಕ್ಕೆ ಬಿದ್ದು ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಗವಿಬೆಟ್ಟದಲ್ಲಿ ನಡೆದಿದೆ.ರಾಕಿದ್ (18) ಯುವಕ ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದ್ದು, ಶನಿವಾರಸಂತೆಯಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸಕಲೇಶಪುರದ ಗವಿಬೆಟ್ಟಕ್ಕೆ ಬಂದಿದ್ದ ರಾಕಿದ್, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಜಾರಿ ಬಿದ್ದಿರುತ್ತಾನೆ. ಪರಿಣಾಮ ಆತನ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ಮತ್ತು ಯಸಳೂರು ಠಾಣೆ ಪೊಲೀಸರ ಸಹಾಯದಿಂದ ರಾಕಿದ್ ನನ್ನು ಮೇಲೆತ್ತಿ ತಕ್ಷಣವೇ ಶನಿವಾರಸಂತೆ ಅಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹಾಸನದ ಹಿಮ್ಸ್ಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.ಯಸಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



