ಹಾಸನ :ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಲು ವಿನೂತನ ಹಾಗು ಅಪಾಯಕಾರಿ ರೀಲ್ಸ್Reels ಮಾಡುವ ಹುಚ್ಚಿನಲ್ಲಿ ಬಿದ್ದಿರುವ ಕೆಲ ಯುವಕರು ಹುಚ್ಚಾಟದಿಂದ ತಮ್ಮ ಜೀವ ಕಳೆದುಕೊಳ್ಳುತ್ತಿದ್ದಾರೆ.
ಇಂತಹುದೆ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು ರೀಲ್ಸ್ ಮಾಡಲು ಹೋಗಿ ಬೆಟ್ಟದ ಪ್ರಪಾತಕ್ಕೆ ಬಿದ್ದು ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಗವಿಬೆಟ್ಟದಲ್ಲಿ ನಡೆದಿದೆ.ರಾಕಿದ್ (18) ಯುವಕ ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದ್ದು, ಶನಿವಾರಸಂತೆಯಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸಕಲೇಶಪುರದ ಗವಿಬೆಟ್ಟಕ್ಕೆ ಬಂದಿದ್ದ ರಾಕಿದ್, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಜಾರಿ ಬಿದ್ದಿರುತ್ತಾನೆ. ಪರಿಣಾಮ ಆತನ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ಮತ್ತು ಯಸಳೂರು ಠಾಣೆ ಪೊಲೀಸರ ಸಹಾಯದಿಂದ ರಾಕಿದ್ ನನ್ನು ಮೇಲೆತ್ತಿ ತಕ್ಷಣವೇ ಶನಿವಾರಸಂತೆ ಅಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹಾಸನದ ಹಿಮ್ಸ್ಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.ಯಸಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



