ಕೋಲಾರ:ರಾಜ್ಯ ಸರ್ಕಾರ ಕರ್ನಾಟಕ ಆಡಳಿತ ಸೇವೆಯ (ಕೆಎಎಸ್-ಕಿರಿಯ ಶ್ರೇಣಿ) ಇಬ್ಬರು ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಡಿಪಿಎಆರ್) ಈ ಕುರಿತು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ನ ವಿಶೇಷ ಭೂಸ್ವಾಧೀನಾಧಿಕಾರಿ-09 ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಜಂಬಗಿ ರೇಣುಕಾಪ್ರಸಾದ್ ದಿಲೀಪ್ ಅವರನ್ನು ಕೋಲಾರ ಉಪ ವಿಭಾಗಾಧಿಕಾರಿಯನ್ನಾಗಿ(AC) ನೇಮಕ ಮಾಡಲಾಗಿದೆ. ಕೋಲಾರ ಎಸಿಯಾಗಿದ್ದ ಡಾ. ಮೈತ್ರಿ ಹೆಚ್.ಪಿ.ಎಸ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರೇಣುಕಾಪ್ರಸಾದ್ ಅವರನ್ನು ನಿಯೋಜಿಸಲಾಗಿದೆ.
ಈ ಆದೇಶದ ಅನ್ವಯ, ಸ್ಥಳ ನಿರೀಕ್ಷಣೆಯಲ್ಲಿರುವ ಅಧಿಕಾರಿಗಳಿಗೆ ತಕ್ಷಣವೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಥವಾ ತಮ್ಮ ಮಾತೃ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ.
Trending
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
- ಶ್ರೀನಿವಾಸಪುರ:ಶತಮಾನಗಳ ಹಳೆಯ ಉನಿಕಿಲಿ ದೇವಾಲಯ ಜೀರ್ಣೋದ್ಧಾರ!
Thursday, April 23



