ಬೆಂಗಳೂರು:ಪತ್ರಕರ್ತರಿಗೆ ಕೋಡುತ್ತಿದ್ದ ರೈಲ್ವೆ ಪಾಸ್ ಯೋಜನೆ ಮತ್ತೆ ಪ್ರಾರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.
ಈ ಕುರಿತಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವಂತ ಶಿವಾನಂದ ತಗಡೂರು, ಭಾರತ ಸರ್ಕಾರದ ರೈಲ್ವೆ ಮಂತ್ರಾಲಯದ ವತಿಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡುವ ಯೋಜನೆ ಈ ಮೊದಲು ಜಾರಿಯಲ್ಲಿತ್ತು ಇದರಿಂದಾಗಿ ಶೇ.50ರಷ್ಟು ರಿಯಾಯಿತಿ ದರದಲ್ಲಿ ರೈಲು ಪ್ರಯಾಣ ಮಾಡುವ ಸೌಲಭ್ಯವನ್ನು ಪತ್ರಕರ್ತರಿಗೆ ಪಡೆದಿದ್ದರು ನಂತರದಲ್ಲಿ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ರೈಲ್ವೆ ಪಾಸ್ ಸೌಲಭ್ಯವನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರದಿಂದ ಪತ್ರಕರ್ತರಿಗೆ ಲಭ್ಯವಿದ್ದ ಯೋಜನೆಯು ಇಲ್ಲದಂತಾಗಿದೆ. ಆದುದರಿಂದ ತಾವುಗಳು ಈ ಬಗ್ಗೆ ಮರುಚಿಂತನೆ ನಡೆಸಿ ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಈ ಮೊದಲು ಕೊಡುತ್ತಿದ್ದ ರೈಲ್ವೆ ಪಾಸ್ ಸೌಲಭ್ಯವನ್ನು ಕೂಡಲೇ ಆರಂಭಿಸುವಂತೆ ಮನವಿ ಮಾಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



