ಬೆಂಗಳೂರು:ಪತ್ರಕರ್ತರಿಗೆ ಕೋಡುತ್ತಿದ್ದ ರೈಲ್ವೆ ಪಾಸ್ ಯೋಜನೆ ಮತ್ತೆ ಪ್ರಾರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.
ಈ ಕುರಿತಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವಂತ ಶಿವಾನಂದ ತಗಡೂರು, ಭಾರತ ಸರ್ಕಾರದ ರೈಲ್ವೆ ಮಂತ್ರಾಲಯದ ವತಿಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡುವ ಯೋಜನೆ ಈ ಮೊದಲು ಜಾರಿಯಲ್ಲಿತ್ತು ಇದರಿಂದಾಗಿ ಶೇ.50ರಷ್ಟು ರಿಯಾಯಿತಿ ದರದಲ್ಲಿ ರೈಲು ಪ್ರಯಾಣ ಮಾಡುವ ಸೌಲಭ್ಯವನ್ನು ಪತ್ರಕರ್ತರಿಗೆ ಪಡೆದಿದ್ದರು ನಂತರದಲ್ಲಿ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ರೈಲ್ವೆ ಪಾಸ್ ಸೌಲಭ್ಯವನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರದಿಂದ ಪತ್ರಕರ್ತರಿಗೆ ಲಭ್ಯವಿದ್ದ ಯೋಜನೆಯು ಇಲ್ಲದಂತಾಗಿದೆ. ಆದುದರಿಂದ ತಾವುಗಳು ಈ ಬಗ್ಗೆ ಮರುಚಿಂತನೆ ನಡೆಸಿ ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಈ ಮೊದಲು ಕೊಡುತ್ತಿದ್ದ ರೈಲ್ವೆ ಪಾಸ್ ಸೌಲಭ್ಯವನ್ನು ಕೂಡಲೇ ಆರಂಭಿಸುವಂತೆ ಮನವಿ ಮಾಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



