ಶ್ರೀನಿವಾಸಪುರ:ದ್ವಿಚಕ್ರವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಘಟನೆ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಮುಂಬಾಗ ಗುರುವಾರ ಸಂಜೆ ಸುಮಾರು 6ಗಂಟೆ ಸಮಯದಲ್ಲಿ ನಡೆದಿರುತ್ತದೆ.
ಮೃತ ಪಟ್ಟಿರುವ ಇಬ್ಬರು ಅಪ್ರಪಾಪ್ತ ಬಾಲಕ ನಿಜಾಮ್ ಹಾಗು ಬಾಲಕಿ ಇಖ್ರಾ ಅಫ್ರೀನ್(13) ಎಂದು ಗುರುತಿಸಲಾಗಿದೆ.
ಶ್ರೀನಿವಾಸಪುರ-ಚಿಂತಾಮಣಿ ರಸ್ತೆಯಲ್ಲಿ ಕಲ್ಲೂರು ಬಳಿಯ ಆದರ್ಶ ಶಾಲೆಯ ವಿಧ್ಯಾರ್ಥಿನಿ ಇಖ್ರಾ ಅಫ್ರೀನ್ ಳನ್ನು ಕರೆ ತರಲು ನಿಜಾಮ್ ದ್ವಿಚಕ್ರವಾಹನ ತಗೆದುಕೊಂಡು ಹೋಗಿ ಅವಳನ್ನು ವಾಹನದಲ್ಲಿ ಕುರಿಸಿಕೊಂಡು ಬರುತ್ತಿದ್ದಾಗ ಎಪಿಎಂಸಿ ಮಾರುಕಟ್ಟೆ ಬಳಿ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದಿದೆ ಇದರಿಂದ ದ್ವಿಚಕ್ರ ವಾಹನದಲ್ಲಿ ಇಬ್ಬರು ನೆಲಕ್ಕೆ ಬಿದಿದ್ದಾರೆ ಅದೆ ಸಮಯಕ್ಕೆ ಎದುರಿನಿಂದ ಬಂದಂತ ಬೊಲೋರೊ ವಾಹನ ಹರಿದು ಬೈಕ್ ಸವಾರ ನಿಜಾಮ್ ಸ್ಥಳದಲ್ಲೇ ಸಾವು ಮೃತ ಪಟ್ಟರೆ ವಿಧ್ಯಾರ್ಥಿನಿ ಇಖ್ರಾ ಅಫ್ರೀನ್ ಜಾಲಪ್ಪ ಅಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿರುವುದಾಗಿ ಹೇಳಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಮುಳಬಾಗಿಲು ಡಿ.ವೈ.ಎಸ್.ಪಿ ಸಂಬಂಧ ಶ್ರೀನಿವಾಸಪುರ ಪಟ್ಟಣ ಇನ್ಸ್ ಪೇಕ್ಟರ್ ನಾರಯಣಸ್ವಾಮಿ ಭೇಟಿ ನೀಡಿ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು್.
ಪೋಲಿಸರಿಗೆ ದೂರು
ಮಾವಿನ ಸಿಸನ್ ಸಂದರ್ಭದಲ್ಲಿ ಶ್ರೀನಿವಾಸಪುರ-ಚಿಂತಾಮಣಿ ರಸ್ತೆಯಲ್ಲಿ ಲಾರಿಗಳದೆ ಕಾರುಬಾರು, ಮಾವು ಸಾಗಿಸಲು ಬಾರಿ ಗಾತ್ರದ ದೊಡ್ಡ ದೊಡ್ಡ ಲಾರಿಗಳು ಇಲ್ಲಿಗೆ ಅಗಮಿಸುತ್ತದೆ ಅವುಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡದೆ ಕೃಷಿ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದ ಪರಿಣಾಮ ರಸ್ತೆಯುದ್ದಕ್ಕೂ ಲಾರಿಗಳೆ ನಿಂತಿರುತ್ತದೆ ಜೊತೆಗೆ ರಸ್ತೆ ಹೆದ್ದಾರಿಯಾಗಿರುವುದರಿಂದ ತಮಿಳನಾಡು ಮತ್ತು ಮಹಾರಾಷ್ಟ್ರ ವಾಹನಗಳ್ಳು ಹೆಚ್ಚು ಒಡಾಡುತ್ತದೆ ಈ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ಸಣ್ಣ-ಪುಟ್ಟ ವಾಹನ್ಗಳ ಒಡಾಟಕ್ಕೆ ಸಮಸ್ಯೆ ಉಂಟಾಗುತ್ತದೆ ಹಾಗು ಅವ್ಯಸ್ಥೆ ಉಂಟಾಗುತ್ತದೆ ಎಂದು ದೂರಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27