ಶ್ರೀನಿವಾಸಪುರ:ದ್ವಿಚಕ್ರವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಘಟನೆ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಮುಂಬಾಗ ಗುರುವಾರ ಸಂಜೆ ಸುಮಾರು 6ಗಂಟೆ ಸಮಯದಲ್ಲಿ ನಡೆದಿರುತ್ತದೆ.
ಮೃತ ಪಟ್ಟಿರುವ ಇಬ್ಬರು ಅಪ್ರಪಾಪ್ತ ಬಾಲಕ ನಿಜಾಮ್ ಹಾಗು ಬಾಲಕಿ ಇಖ್ರಾ ಅಫ್ರೀನ್(13) ಎಂದು ಗುರುತಿಸಲಾಗಿದೆ.
ಶ್ರೀನಿವಾಸಪುರ-ಚಿಂತಾಮಣಿ ರಸ್ತೆಯಲ್ಲಿ ಕಲ್ಲೂರು ಬಳಿಯ ಆದರ್ಶ ಶಾಲೆಯ ವಿಧ್ಯಾರ್ಥಿನಿ ಇಖ್ರಾ ಅಫ್ರೀನ್ ಳನ್ನು ಕರೆ ತರಲು ನಿಜಾಮ್ ದ್ವಿಚಕ್ರವಾಹನ ತಗೆದುಕೊಂಡು ಹೋಗಿ ಅವಳನ್ನು ವಾಹನದಲ್ಲಿ ಕುರಿಸಿಕೊಂಡು ಬರುತ್ತಿದ್ದಾಗ ಎಪಿಎಂಸಿ ಮಾರುಕಟ್ಟೆ ಬಳಿ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದಿದೆ ಇದರಿಂದ ದ್ವಿಚಕ್ರ ವಾಹನದಲ್ಲಿ ಇಬ್ಬರು ನೆಲಕ್ಕೆ ಬಿದಿದ್ದಾರೆ ಅದೆ ಸಮಯಕ್ಕೆ ಎದುರಿನಿಂದ ಬಂದಂತ ಬೊಲೋರೊ ವಾಹನ ಹರಿದು ಬೈಕ್ ಸವಾರ ನಿಜಾಮ್ ಸ್ಥಳದಲ್ಲೇ ಸಾವು ಮೃತ ಪಟ್ಟರೆ ವಿಧ್ಯಾರ್ಥಿನಿ ಇಖ್ರಾ ಅಫ್ರೀನ್ ಜಾಲಪ್ಪ ಅಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿರುವುದಾಗಿ ಹೇಳಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಮುಳಬಾಗಿಲು ಡಿ.ವೈ.ಎಸ್.ಪಿ ಸಂಬಂಧ ಶ್ರೀನಿವಾಸಪುರ ಪಟ್ಟಣ ಇನ್ಸ್ ಪೇಕ್ಟರ್ ನಾರಯಣಸ್ವಾಮಿ ಭೇಟಿ ನೀಡಿ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು್.
ಪೋಲಿಸರಿಗೆ ದೂರು
ಮಾವಿನ ಸಿಸನ್ ಸಂದರ್ಭದಲ್ಲಿ ಶ್ರೀನಿವಾಸಪುರ-ಚಿಂತಾಮಣಿ ರಸ್ತೆಯಲ್ಲಿ ಲಾರಿಗಳದೆ ಕಾರುಬಾರು, ಮಾವು ಸಾಗಿಸಲು ಬಾರಿ ಗಾತ್ರದ ದೊಡ್ಡ ದೊಡ್ಡ ಲಾರಿಗಳು ಇಲ್ಲಿಗೆ ಅಗಮಿಸುತ್ತದೆ ಅವುಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡದೆ ಕೃಷಿ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದ ಪರಿಣಾಮ ರಸ್ತೆಯುದ್ದಕ್ಕೂ ಲಾರಿಗಳೆ ನಿಂತಿರುತ್ತದೆ ಜೊತೆಗೆ ರಸ್ತೆ ಹೆದ್ದಾರಿಯಾಗಿರುವುದರಿಂದ ತಮಿಳನಾಡು ಮತ್ತು ಮಹಾರಾಷ್ಟ್ರ ವಾಹನಗಳ್ಳು ಹೆಚ್ಚು ಒಡಾಡುತ್ತದೆ ಈ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ಸಣ್ಣ-ಪುಟ್ಟ ವಾಹನ್ಗಳ ಒಡಾಟಕ್ಕೆ ಸಮಸ್ಯೆ ಉಂಟಾಗುತ್ತದೆ ಹಾಗು ಅವ್ಯಸ್ಥೆ ಉಂಟಾಗುತ್ತದೆ ಎಂದು ದೂರಿದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27