ಶ್ರೀನಿವಾಸಪುರ: ಆಯೋದ್ಯ ನಗರದ ಶಿವಾಚರ್ಯ ನಗರ್ತ ವೈಶ್ಯ ಸಂಘದ 2022-25 ನೇ ಸಾಲಿನ ಆಡಳಿತ ಮಂಡಳಿ ಕೇಂದ್ರ ಸ್ಥಾನದ ನಿರ್ದೇಶಕರ ಚುನಾವಣೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಬಿ.ಶಿವಕುಮಾರ್ ಅಲಿಯಾಸ್ ಕಪಾಲಿಶಿವು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.
ಚುನಾಯಿತ ನಿರ್ದೇಶಕ ಶಿವಕುಮಾರ್ ಮಾತನಾಡಿ ನನ್ನ ಗೆಲವಿಗೆ ಶ್ರಮಿಸಿದ ನಮ್ಮ ಸಮುದಾಯದ ಹಿರಿಯರು ಮಾತೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಸಮುದಾಯದ ಬಹುತೇಕ ಕುಟುಂಬಗಳು ವ್ಯಾಪಾರದಿಂದಲೇ ಜೀವನ ನಡೆಸುವರಾಗಿದ್ದು ಅವರ ಅಭಿವೃದ್ದಿಗೆ ಮತ್ತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಸಮಾಜದ ಕೇಂದ್ರ ಸಂಘದಿಂದ ಸಿಗುವಂತ ಸೌಲ್ಯಭಗಳನ್ನು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲದಲ್ಲಿ ಸಿಗುವಂತೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್, ಬೆಂಗಳೂರುಮುರಳಿಕೃಷ್ಣ, ರಾಜಶೇಖರ್,ಕಪಾಲಿಮಂಜು,ಅಡಿಕೆ ಹರೀಶ್,ನವೀನ್,ಅನಿಲ್ ಕುಮಾರ್,ರಾಮಲಿಂಗಪ್ಪ,ಮಂಜುನಾಥ್, ನಗರ್ತ ಮಹಿಳಾ ಸಂಘದ ಮುಖಂಡರಾದ ಪುಷ್ಪಮ್ಮ,ಭಾರತಿ,ದೇವಿಕಾ, ಚಂದ್ರಕಲಾ,ಅಮುದಾ ಮುಂತಾದವರು ಇದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15