ಶ್ರೀನಿವಾಸಪುರ: ಆಯೋದ್ಯ ನಗರದ ಶಿವಾಚರ್ಯ ನಗರ್ತ ವೈಶ್ಯ ಸಂಘದ 2022-25 ನೇ ಸಾಲಿನ ಆಡಳಿತ ಮಂಡಳಿ ಕೇಂದ್ರ ಸ್ಥಾನದ ನಿರ್ದೇಶಕರ ಚುನಾವಣೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಬಿ.ಶಿವಕುಮಾರ್ ಅಲಿಯಾಸ್ ಕಪಾಲಿಶಿವು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.
ಚುನಾಯಿತ ನಿರ್ದೇಶಕ ಶಿವಕುಮಾರ್ ಮಾತನಾಡಿ ನನ್ನ ಗೆಲವಿಗೆ ಶ್ರಮಿಸಿದ ನಮ್ಮ ಸಮುದಾಯದ ಹಿರಿಯರು ಮಾತೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಸಮುದಾಯದ ಬಹುತೇಕ ಕುಟುಂಬಗಳು ವ್ಯಾಪಾರದಿಂದಲೇ ಜೀವನ ನಡೆಸುವರಾಗಿದ್ದು ಅವರ ಅಭಿವೃದ್ದಿಗೆ ಮತ್ತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಸಮಾಜದ ಕೇಂದ್ರ ಸಂಘದಿಂದ ಸಿಗುವಂತ ಸೌಲ್ಯಭಗಳನ್ನು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲದಲ್ಲಿ ಸಿಗುವಂತೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್, ಬೆಂಗಳೂರುಮುರಳಿಕೃಷ್ಣ, ರಾಜಶೇಖರ್,ಕಪಾಲಿಮಂಜು,ಅಡಿಕೆ ಹರೀಶ್,ನವೀನ್,ಅನಿಲ್ ಕುಮಾರ್,ರಾಮಲಿಂಗಪ್ಪ,ಮಂಜುನಾಥ್, ನಗರ್ತ ಮಹಿಳಾ ಸಂಘದ ಮುಖಂಡರಾದ ಪುಷ್ಪಮ್ಮ,ಭಾರತಿ,ದೇವಿಕಾ, ಚಂದ್ರಕಲಾ,ಅಮುದಾ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



