ಶ್ರೀನಿವಾಸಪುರ:ಸತ್ಸಂಗ ಬಳಗ ಮತ್ತು ಶಂಕರ ಸೇವಾ ಸಮಿತಿ ಸಂಯುಕ್ತವಾಗಿ ಶ್ರೀನಿವಾಸಪುರದ ಶಂಕರಮಠದಲ್ಲಿ ಲೋಕ ಕಲ್ಯಾಣರ್ಥವಾಗಿ ಶ್ರೀ ದುರ್ಗಾ ಹೋಮ ನಡೆಸಲಾಯಿತು.
ಶಂಕರ ಮಠದ ಆವರಣದಲ್ಲಿ ಆಯೋಜಿಸಿದ್ದ ಹೋಮ ಕುಂಡಕ್ಕೆ ಸತ್ಸಂಗ ಬಳಗದ ಮುಖ್ಯಸ್ಥರಾದ ಸತ್ಯಮೂರ್ತಿ-ಮಂಗಳಾ ದಂಪತಿ ಪೂಜೆ ಸಲ್ಲಿಸಿದ ನಂತರ ಅರ್ಚಕರಾದ ವೇದಬ್ರಹ್ಮ ಕುರುಮಾಕಲಹಳ್ಳಿ ಪ್ರಕಾಶ್ ರವರು ಪೂಜಾ ವಿಧಿವಿಧಾನಗಳನ್ನು ನಡೆಸಿ ಹೋಮ ನಡೆಸಿಕೊಟ್ಟರು.
ಸತ್ಸಂಗ ಬಳಗದ ಮುಖ್ಯಸ್ಥ ಸತ್ಯಮೂರ್ತಿ ಮಾತನಾಡಿ ದುರ್ಗಾದೇವಿಯು ಶಕ್ತಿ ಸ್ವರೂಪಿಣಿಯಾಗಿದ್ದು ದುಷ್ಟ ಶಿಕ್ಷಕಿ ಶಿಷ್ಠ ರಕ್ಷಕಿಯಾದ ಮಾತೆಯನ್ನು ನವರಾತ್ರಿಗಳಂದು 9 ರೂಪಗಳಾಗಿ ಪೂಜಿಸುವುದು ವಿಶೇಷ ಹಾಗೆ ದುರ್ಗಾ ಮಂತ್ರಗಳನ್ನು ಪಠಿಸುವುದರಿಂದ ಮತ್ತು ಹೋಮ ಹವನಾದಿಗಳನ್ನು ನಡೆಸುವುದರಿಂದ ಪ್ರತಿಯೊಬ್ಬರ ಜೀವನದಲ್ಲೂ ಸಂಕಷ್ಟಗಳು ದೂರವಾಗುತ್ತದೆ ಭಯ ಮತ್ತು ಅಡೆತಡೆಗಳು ನಿವಾರಣೆಯಾಗುತ್ತದೆ ಅದರಂತೆ ವಿಜಯದಶಮಿಯಂದು ಸಮಸ್ತ ಜನರ ಶ್ರೆಯಸ್ಸಿಗಾಗಿ ಲೋಕಕಲ್ಯಾಣಾರ್ಥವಾಗಿ ಶ್ರೀ ದುರ್ಗಾಹೋಮ ನಡೆಸಲಾಯಿತು ಎಂದರು.
ಇದೆ ಸಂದರ್ಭದಲ್ಲಿ ಕನ್ಯಕಾ ಪೂಜೆಯನ್ನು ನೇರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ನಾಗವೇಣಿರೆಡ್ಡಿ,ಶಂಕರ ಸೇವಾ ಸಮಿತಿಯ ಜೆ.ಕೆ.ಮಂಜುನಾಥ್, ಪುರಸಭೆ ಸದಸ್ಯೆ ಶಾಂತಮ್ಮ, ಶಿಕ್ಷಕಿ ಸುಧಾಮಣಿ, ಸತ್ಸಂಗ ಬಳಗದ ಸದಸ್ಯರು ಹಾಗು ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28