ಶ್ರೀನಿವಾಸಪುರ:ಸತ್ಸಂಗ ಬಳಗ ಮತ್ತು ಶಂಕರ ಸೇವಾ ಸಮಿತಿ ಸಂಯುಕ್ತವಾಗಿ ಶ್ರೀನಿವಾಸಪುರದ ಶಂಕರಮಠದಲ್ಲಿ ಲೋಕ ಕಲ್ಯಾಣರ್ಥವಾಗಿ ಶ್ರೀ ದುರ್ಗಾ ಹೋಮ ನಡೆಸಲಾಯಿತು.
ಶಂಕರ ಮಠದ ಆವರಣದಲ್ಲಿ ಆಯೋಜಿಸಿದ್ದ ಹೋಮ ಕುಂಡಕ್ಕೆ ಸತ್ಸಂಗ ಬಳಗದ ಮುಖ್ಯಸ್ಥರಾದ ಸತ್ಯಮೂರ್ತಿ-ಮಂಗಳಾ ದಂಪತಿ ಪೂಜೆ ಸಲ್ಲಿಸಿದ ನಂತರ ಅರ್ಚಕರಾದ ವೇದಬ್ರಹ್ಮ ಕುರುಮಾಕಲಹಳ್ಳಿ ಪ್ರಕಾಶ್ ರವರು ಪೂಜಾ ವಿಧಿವಿಧಾನಗಳನ್ನು ನಡೆಸಿ ಹೋಮ ನಡೆಸಿಕೊಟ್ಟರು.
ಸತ್ಸಂಗ ಬಳಗದ ಮುಖ್ಯಸ್ಥ ಸತ್ಯಮೂರ್ತಿ ಮಾತನಾಡಿ ದುರ್ಗಾದೇವಿಯು ಶಕ್ತಿ ಸ್ವರೂಪಿಣಿಯಾಗಿದ್ದು ದುಷ್ಟ ಶಿಕ್ಷಕಿ ಶಿಷ್ಠ ರಕ್ಷಕಿಯಾದ ಮಾತೆಯನ್ನು ನವರಾತ್ರಿಗಳಂದು 9 ರೂಪಗಳಾಗಿ ಪೂಜಿಸುವುದು ವಿಶೇಷ ಹಾಗೆ ದುರ್ಗಾ ಮಂತ್ರಗಳನ್ನು ಪಠಿಸುವುದರಿಂದ ಮತ್ತು ಹೋಮ ಹವನಾದಿಗಳನ್ನು ನಡೆಸುವುದರಿಂದ ಪ್ರತಿಯೊಬ್ಬರ ಜೀವನದಲ್ಲೂ ಸಂಕಷ್ಟಗಳು ದೂರವಾಗುತ್ತದೆ ಭಯ ಮತ್ತು ಅಡೆತಡೆಗಳು ನಿವಾರಣೆಯಾಗುತ್ತದೆ ಅದರಂತೆ ವಿಜಯದಶಮಿಯಂದು ಸಮಸ್ತ ಜನರ ಶ್ರೆಯಸ್ಸಿಗಾಗಿ ಲೋಕಕಲ್ಯಾಣಾರ್ಥವಾಗಿ ಶ್ರೀ ದುರ್ಗಾಹೋಮ ನಡೆಸಲಾಯಿತು ಎಂದರು.
ಇದೆ ಸಂದರ್ಭದಲ್ಲಿ ಕನ್ಯಕಾ ಪೂಜೆಯನ್ನು ನೇರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ನಾಗವೇಣಿರೆಡ್ಡಿ,ಶಂಕರ ಸೇವಾ ಸಮಿತಿಯ ಜೆ.ಕೆ.ಮಂಜುನಾಥ್, ಪುರಸಭೆ ಸದಸ್ಯೆ ಶಾಂತಮ್ಮ, ಶಿಕ್ಷಕಿ ಸುಧಾಮಣಿ, ಸತ್ಸಂಗ ಬಳಗದ ಸದಸ್ಯರು ಹಾಗು ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



