ಶ್ರೀನಿವಾಸಪುರ:ಸತ್ಸಂಗ ಬಳಗ ಮತ್ತು ಶಂಕರ ಸೇವಾ ಸಮಿತಿ ಸಂಯುಕ್ತವಾಗಿ ಶ್ರೀನಿವಾಸಪುರದ ಶಂಕರಮಠದಲ್ಲಿ ಲೋಕ ಕಲ್ಯಾಣರ್ಥವಾಗಿ ಶ್ರೀ ದುರ್ಗಾ ಹೋಮ ನಡೆಸಲಾಯಿತು.
ಶಂಕರ ಮಠದ ಆವರಣದಲ್ಲಿ ಆಯೋಜಿಸಿದ್ದ ಹೋಮ ಕುಂಡಕ್ಕೆ ಸತ್ಸಂಗ ಬಳಗದ ಮುಖ್ಯಸ್ಥರಾದ ಸತ್ಯಮೂರ್ತಿ-ಮಂಗಳಾ ದಂಪತಿ ಪೂಜೆ ಸಲ್ಲಿಸಿದ ನಂತರ ಅರ್ಚಕರಾದ ವೇದಬ್ರಹ್ಮ ಕುರುಮಾಕಲಹಳ್ಳಿ ಪ್ರಕಾಶ್ ರವರು ಪೂಜಾ ವಿಧಿವಿಧಾನಗಳನ್ನು ನಡೆಸಿ ಹೋಮ ನಡೆಸಿಕೊಟ್ಟರು.
ಸತ್ಸಂಗ ಬಳಗದ ಮುಖ್ಯಸ್ಥ ಸತ್ಯಮೂರ್ತಿ ಮಾತನಾಡಿ ದುರ್ಗಾದೇವಿಯು ಶಕ್ತಿ ಸ್ವರೂಪಿಣಿಯಾಗಿದ್ದು ದುಷ್ಟ ಶಿಕ್ಷಕಿ ಶಿಷ್ಠ ರಕ್ಷಕಿಯಾದ ಮಾತೆಯನ್ನು ನವರಾತ್ರಿಗಳಂದು 9 ರೂಪಗಳಾಗಿ ಪೂಜಿಸುವುದು ವಿಶೇಷ ಹಾಗೆ ದುರ್ಗಾ ಮಂತ್ರಗಳನ್ನು ಪಠಿಸುವುದರಿಂದ ಮತ್ತು ಹೋಮ ಹವನಾದಿಗಳನ್ನು ನಡೆಸುವುದರಿಂದ ಪ್ರತಿಯೊಬ್ಬರ ಜೀವನದಲ್ಲೂ ಸಂಕಷ್ಟಗಳು ದೂರವಾಗುತ್ತದೆ ಭಯ ಮತ್ತು ಅಡೆತಡೆಗಳು ನಿವಾರಣೆಯಾಗುತ್ತದೆ ಅದರಂತೆ ವಿಜಯದಶಮಿಯಂದು ಸಮಸ್ತ ಜನರ ಶ್ರೆಯಸ್ಸಿಗಾಗಿ ಲೋಕಕಲ್ಯಾಣಾರ್ಥವಾಗಿ ಶ್ರೀ ದುರ್ಗಾಹೋಮ ನಡೆಸಲಾಯಿತು ಎಂದರು.
ಇದೆ ಸಂದರ್ಭದಲ್ಲಿ ಕನ್ಯಕಾ ಪೂಜೆಯನ್ನು ನೇರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ನಾಗವೇಣಿರೆಡ್ಡಿ,ಶಂಕರ ಸೇವಾ ಸಮಿತಿಯ ಜೆ.ಕೆ.ಮಂಜುನಾಥ್, ಪುರಸಭೆ ಸದಸ್ಯೆ ಶಾಂತಮ್ಮ, ಶಿಕ್ಷಕಿ ಸುಧಾಮಣಿ, ಸತ್ಸಂಗ ಬಳಗದ ಸದಸ್ಯರು ಹಾಗು ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



