ಶ್ರೀನಿವಾಸಪುರ:ಪಟ್ಟಣದ ಹೊರವಲಯದ ಹೋದಲಿ ಪಂಚಾಯಿತಿ ವ್ಯಾಪ್ತಿಯ ಹೊಗಳಗೆರೆ ರಸ್ತೆಯಲ್ಲಿನ ಗುಡ್ಡದ ಮೇಲಿನ ಗವಿಗಟ್ಟು ಶ್ರೀ ಕಾಲಭೈರವೇಶ್ವರ ದೇವಾಲಯದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಪೂಜಾ ಕಾರ್ಯಕ್ರಮದ ಅಂಗವಾಗಿ ಶ್ರೀಪಂಚಶಿರ(ಐದು ತಲೆ)ನಾಗಮ್ಮ ದೇವಿ ಪ್ರತಿಷ್ಠಾಪನೆ ಮತ್ತು ಧ್ವಜಾರೋಹಣ ಕಾರ್ಯಕ್ರಮ ಶನಿವಾರ ನೇರವೇರಿತು ಇಂದು ಭಾನುವಾರ ಘಟ್ಟುಶ್ರೀ ಗಂಗಮ್ಮ ದೇವಿ,ಶ್ರೀ ಕಾಲಭೈರವೇಶ್ವರ,ಶ್ರೀ ಚಂದ್ರಮೌಳೇಶ್ವರ.ಶ್ರೀಪಾತಾಳೇಶ್ವರ ಹಾಗು ಶ್ರೀ ಅಭಯಾಂಜನೇಯ ಸೇರಿದಂತೆ ಐದು ದೇವರುಗಳ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆಡೆಯಿತು ದೇವಾಲಯ ಸ್ಥಾಪಕ ಅಧ್ಯಕ್ಷ ಗಾರೆಮೇಸ್ತ್ರೀ ದೊಡ್ಡನಾಗಣ್ಣ ಮತ್ತು ಸಂಚಾಲಕ ಪುರ್ನಹಳ್ಳಿ ಬುಲೇಟ್ ವೆಂಕಟರೆಡ್ದಿ ನೇತೃತ್ವದಲ್ಲಿ ಭಕ್ತಾದಿಗಳ ನೆರವಿನಿಂದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು ವಿವದಡೆಯಿಂದ ಯಲ್ದೂರು,ಹೊದಲಿ,ಸೋಮಯಾಜಲಹಳ್ಳಿ ಆವಲಕುಪ್ಪ,ಹೊಗಳಗೆರೆ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೋಂಡು ಪುನಿತರಾದರು.
ಕೇಂದ್ರ ಸರ್ಕಾರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ದಂಪತಿ, ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಪುರಸಭೆ ಮಾಜಿ ಅಧ್ಯಕ್ಷ ಮುನಿಯಪ್ಪ,ಡಾ.ಮಂಜುನಾಥ್,ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿ ನಾರಯಣಸ್ವಾಮಿ,ಹೊದಲಿರಾಮಮೂರ್ತಿ ಮುಳಬಾಗಿಲು ಹಿರಿಯ ಕಾಂಗ್ರೆಸ್ ಮುಖಂಡ ರಾಮಪ್ರಸಾದ್,ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



