ಶ್ರೀನಿವಾಸಪುರ:ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ತಂಡ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು ಅವರು ಶ್ರೀನಿವಾಸಪುರ ಪಟ್ಟಣದ ರಾಜಾಜಿ ರಸ್ತೆಯ ಚಿಂತಾಮಣಿ ವೃತ್ತದಲ್ಲಿ ಏರ್ಪಡಿಸಿದ್ದ ಪಂಚರತ್ನ ಯೋಜನೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ದಲಿತ ಮುಖಂಡ ಮುನಿಯಪ್ಪನವರನ್ನು ಸೋಲಿಸಲು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಧಿಕ್ಕರಿಸಿ ಇಲ್ಲೂ ಬಿಜೆಪಿಯನ್ನು ಗೆಲ್ಲಿಸಿದರು.
ಸಿದ್ದರಾಮಯ್ಯ ರಮೇಶ್ ಕುಮಾರ್ ಚಿತಾವಣೆಯಿಂದ ನಾನು ಆಡಳಿತ ಕಳೆದುಕೊಂಡು ಬಿಜೆಪಿ ಅಧಿಕಾರಕ್ಕೆ ಬಂದಿತು ಇದರ ಪರಿಣಾಮ ಅಲ್ಲೆಲ್ಲೋ ಕರಾವಳಿಯಲ್ಲಿದ್ದಂತ ಹಿಜಾಬ್ ಹೆಸರಿನ ವಸ್ತ್ರ ಸಂವಿತೆ ಕೋಮು ಅಶಾಂತಿ ವಾತವರಣ ಇಡಿ ಕಾರ್ನಾಟಕಕ್ಕೆ ಹಬ್ಬಿತು ಧರ್ಮ ಸಂಘರ್ಷಕ್ಕೆ ಕಾರಣವಾಯಿತು ಸರ್ವ ಧರ್ಮಗಳ ಜನರ ನಡುವೆ ಇದ್ದ ಸೌಹಾರ್ದತೆ ಹಲಾಲ್ ಕಟ್ ಜಟ್ಕಾ ಕಟ್ ಎಂದು ಅಹಾರದ ಹೆಸರಿನಲ್ಲಿ ಧರ್ಮಸಂಘರ್ಷಕ್ಕೆ ಕಾರಣವಾಯಿತು ಇದಕ್ಕೆಲ್ಲ ನಿಮ್ಮೂರಿನ ಮಹಾನುಭಾವನ ಕುತಂತ್ರವೂ ಕಾರಣವಾಗಿದೆ ಎಂದು ದೂರಿದರು.
ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದವರು ನಮ್ಮ ಪಕ್ಷದ ಮೇಲೆ ಬಿಜೆಪಿ ಬಿ ಟೀಮ್ ಎಂದು ನಮ್ಮ ಮೇಲೆ ಆರೋಪ ಹೊರೆಸುತ್ತಾರೆ,ಇವರ ಕುತಂತ್ರದಿಂದ ರಾಜ್ಯದಲ್ಲಿ ಕೋಮು ಸೌರ್ಹಾದತೆ ಹಾಳಾಗಿದೆ ಧರ್ಮಗಳ ನಡುವಿನ ಸಹೋದರತ್ವ ಭಾವನೆಗೆ ಧಕ್ಕೆಯಾಗಿದೆ,ನೆಹರು ಕುಟುಂಬದ ಹೆಸರಿನಲ್ಲಿ ಮೂರು ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ ಎಂದು ಹೇಳುವ ರಮೇಶ್ ಕುಮಾರ್ ತಾಲೂಕಿನಲ್ಲಿ ಅವರ ಅಭಿವೃದ್ದಿ ಶೂನ್ಯ ಎತ್ತಿನ ಹೊಳೆ ನೀರು ಕೊಡುತ್ತೇನೆ ಎಂದವರು ಕೊಟ್ಟಿರುವ ನೀರು ಎಂತಹದು ಎಂದರೆ ಮುಂದಿನ ದಿನಗಳಲ್ಲಿ ಇಲ್ಲಿನ ಜನ ಕ್ಯಾನ್ಸರ್ ಪೀಡಿತರಾಗುತ್ತಾರೆ ಇಂತವರಿಗೆ ಕ್ಷೇತ್ರದಲ್ಲಿ ಓಟು ಕೇಳುವ ನೈತಿಕ ಹಕ್ಕು ಇಲ್ಲ ಎಂದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



