ನ್ಯೂಜ್ ಡೆಸ್ಕ್: ಪ್ರಿಯತಮೆಗೆ ಮೊಬೈಲ್ ಫೋನ್ ಕೊಡಿಸಲು ಹೆತ್ತಮ್ಮನನ್ನೆ ಹತ್ಯೆ ಮಾಡಿರುವ ಅಮಾನವೀಯ ಘಟನೆ ತೆಂಲಂಗಾಣದ ಖಮ್ಮಂ ನಗರದಲ್ಲಿ ಮಂಗಳವಾರ ನಡೆದಿದೆ.
ಖಮ್ಮಂ ನಗರದ ಖಾನಾಪುರಕ್ಕೆ ಸೇರಿದ ಲಕ್ಷ್ಮೀನಾರಾಯಣ-ವಾಣಿ ದಂಪತಿಗೆ ಇಬ್ಬರು ಗಂಡು ಮಕ್ಕಳು ಇಬ್ಬರು ಕುಡಿತಕ್ಕೆ ದಾಸರಾಗಿ ಮೋಜು ಮಸ್ಥ ಜಲ್ಸಾ ಮಾಡುತ್ತಿದ್ದು .ಕಿರಿಯ ಮಗ ಗೋಪಿನಾಥ್ ಮಂಗಳವಾರ ತನ್ನ ತಾಯಿ ಬಳಿ ಬಂದು ಹಣ ಕೇಳಿದ್ದಾನೆ. ತಾಯಿ ತನ್ನ ಬಳಿ ಹಣ ಇಲ್ಲ ಎಂದಾಗ ಮೈಮೇಲಿನ ಚಿನ್ನಾಭರಣ ನೀಡಿಸುವಂತೆ ಒತ್ತಾಯಿಸಿದ್ದಾನೆ ಆಕೆ ತಾಯಿ ಒಪ್ಪದಿದ್ದ ಕಾರಣಕ್ಕೆ ತಾಯಿ-ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಗೋಪಿ ತಾಯಿ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಮೈಲಿನ ಬಂಗಾರದ ಆಭರಣಗಳನ್ನು ತಗೆದುಕೊಂಡು ಓಡಿಹೋಗಿದ್ದಾನೆ ಕೆಲ ಹೊತ್ತಿನ ನಂತರ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಆಕೆ ಹಾಸಿಗೆಯ ಮೇಲೆ ಶವವಾಗಿ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮೃತಳ ಪತಿ ಲಕ್ಷ್ಮೀನಾರಾಯಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಗೋಪಿಯನ್ನು ಬಂಧಿಸಿದಾಗ ಅವನು ನೀಡಿದ ಹೇಳಿಕೆಯಂತೆ ಪ್ರಿಯತಮೆಗೆ ಫೊನ್ ಕೊಡಿಸಲು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



