ನ್ಯೂಜ್ ಡೆಸ್ಕ್: ಪ್ರಿಯತಮೆಗೆ ಮೊಬೈಲ್ ಫೋನ್ ಕೊಡಿಸಲು ಹೆತ್ತಮ್ಮನನ್ನೆ ಹತ್ಯೆ ಮಾಡಿರುವ ಅಮಾನವೀಯ ಘಟನೆ ತೆಂಲಂಗಾಣದ ಖಮ್ಮಂ ನಗರದಲ್ಲಿ ಮಂಗಳವಾರ ನಡೆದಿದೆ.
ಖಮ್ಮಂ ನಗರದ ಖಾನಾಪುರಕ್ಕೆ ಸೇರಿದ ಲಕ್ಷ್ಮೀನಾರಾಯಣ-ವಾಣಿ ದಂಪತಿಗೆ ಇಬ್ಬರು ಗಂಡು ಮಕ್ಕಳು ಇಬ್ಬರು ಕುಡಿತಕ್ಕೆ ದಾಸರಾಗಿ ಮೋಜು ಮಸ್ಥ ಜಲ್ಸಾ ಮಾಡುತ್ತಿದ್ದು .ಕಿರಿಯ ಮಗ ಗೋಪಿನಾಥ್ ಮಂಗಳವಾರ ತನ್ನ ತಾಯಿ ಬಳಿ ಬಂದು ಹಣ ಕೇಳಿದ್ದಾನೆ. ತಾಯಿ ತನ್ನ ಬಳಿ ಹಣ ಇಲ್ಲ ಎಂದಾಗ ಮೈಮೇಲಿನ ಚಿನ್ನಾಭರಣ ನೀಡಿಸುವಂತೆ ಒತ್ತಾಯಿಸಿದ್ದಾನೆ ಆಕೆ ತಾಯಿ ಒಪ್ಪದಿದ್ದ ಕಾರಣಕ್ಕೆ ತಾಯಿ-ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಗೋಪಿ ತಾಯಿ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಮೈಲಿನ ಬಂಗಾರದ ಆಭರಣಗಳನ್ನು ತಗೆದುಕೊಂಡು ಓಡಿಹೋಗಿದ್ದಾನೆ ಕೆಲ ಹೊತ್ತಿನ ನಂತರ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಆಕೆ ಹಾಸಿಗೆಯ ಮೇಲೆ ಶವವಾಗಿ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮೃತಳ ಪತಿ ಲಕ್ಷ್ಮೀನಾರಾಯಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಗೋಪಿಯನ್ನು ಬಂಧಿಸಿದಾಗ ಅವನು ನೀಡಿದ ಹೇಳಿಕೆಯಂತೆ ಪ್ರಿಯತಮೆಗೆ ಫೊನ್ ಕೊಡಿಸಲು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



