ನ್ಯೂಜ್ ಡೆಸ್ಕ್:ದಾರಿ ತಪ್ಪಿದ ಒಂಟಿ ಆನೆಯೊಂದು ಜನ ವಸತಿ ಪ್ರದೇಶಕ್ಕೆ ಬಂದು ಮತ್ತೆ ಕಾಡಿಗೆ ಹೋಗಲು ದಾರಿಕಾಣದೆ ಜನರನ್ನು ನೋಡಿ ಗಾಭರಿಯಿಂದ ರಾದಾಂತ ಸೃಷ್ಟಿಸಿದ ಘಟನೆ ಆಂಧ್ರದ ಚಿತ್ತೂರು ಜಿಲ್ಲೆ ಪಲಮನೇರು ನಗರದ ಹೊರಭಾಗದ ಪ್ರಶಾಂತ ನಗರದಲ್ಲಿ ನಡೆದಿದ್ದು ಅನೆ ದಾಳಿಯಲ್ಲಿ ಅರಣ್ಯಾಧಿಕಾರಿಯೊಬ್ಬರು ಗಾಯಗೊಂಡಿದ್ದಾರಲ್ಲದೆ ಹಸುವಿನ ಕರುವು ಮೇಲು ಆನೆ ದಾಳಿ ಮಾಡಿದ ಹಿನ್ನಲೆಯಲ್ಲಿ ಕರು ಸ್ಥಳದಲ್ಲೆ ಸಾವನಪ್ಪಿದೆ.
ಬೆಳಿಗ್ಗೆ 6 ಗಂಟೆಗೆ ಸಮಯದಲ್ಲಿ ನಗರದ ಹೋರವಲಯದ ಹೆದ್ದಾರಿ ಬಳಿ ಮಲವಿಸರ್ಜನೆ ಮಾಡುತ್ತಿದ್ದ ಒಂಟಿ ಆನೆಯನ್ನು ನೋಡಿದ ಕೆಲವರು ಮೊಬೈಲ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಇದರಿಂದ ಗುಂಪು ಗುಂಪಾಗಿ ಜನರು ಹೆಚ್ಚಾಗಿ ಬಂದ ಹಿನ್ನಲೆಯಲ್ಲಿ ಗಾಭಾರಿಯಾದ ಆನೆ ಸುಮಾರು 5 ಗಂಟೆಗಳ ಕಾಲ ದಿಕ್ಕೆಟ್ಟು ಎಲ್ಲೆಂದರಲ್ಲಿ ಒಡಾಡುತ್ತ ಅರಣ್ಯ ಅಧಿಕಾರಿಗಳನ್ನು ಕಾಡಿಸಿದೆ ಇನ್ನೊಂದಡೆ ಸ್ಥಳಿಯ ನಿವಾಸಿಗಳಿಗೆ ಆತಂಕ ಸೃಷ್ಟಿಯಾಗಿದೆ ಇದರಿಂದಾಗಿ ಸತ್ಯನಾರಾಯಣ ದೇವಸ್ಥಾನದ ಬಳಿಯ ಚಿನ್ನೂರು ಸೇತುವೆಯಿಂದ ಗಂಗಾವರಂ ಕಡೆಗೆ ವಾಹನವನ್ನು ಕಾಡಿಗೆ ತಿರುಗಿಸಲು ಪ್ರಯತ್ನಿಸುತ್ತಿದ್ದ ಅರಣ್ಯ ವಿಭಾಗಾಧಿಕಾರಿ ಸುಕುಮಾರ್ ಮೇಲೆ ಆನೆ ದಾಳಿ ಮಾಡಿದ್ದು ಇದರಿಂದ ಅವರ ಕಾಲಿಗೆ ಗಂಭೀರ ಗಾಯವಾಗಿದೆ ಸುಮಾರು 5 ಗಂಟೆಗಳ ಕಾಲ ಕಾಡಿಸಿದ ಆನೆಯನ್ನು ಅರಣ್ಯ ಅಧಿಕಾರಿಗಳು ಪಟಾಕಿ ಸಿಡಿಸಿ, ಆನೆಯನ್ನು ಗಂಗಾವರಂನಿಂದ ಆಂಜನೇಯ ಸ್ವಾಮಿ ದೇವಾಲಯದ ಹಿಂದಿನ ಕಾಡಿಗೆ ಸುಮಾರು ಒಂದು ಮೈಲಿ ದೂರದಲ್ಲಿ ಸ್ಥಳಾಂತರಿಸಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



