ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನೆವೇರಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಲೋಕಕಲ್ಯಾಣಾರ್ಥ ವಿಜಯಿ ಯಾತ್ರೆಯಲ್ಲಿರುವ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ಸೋಮವಾರ ಸಂಜೆ 5 ಗಂಟೆಗೆ ಶ್ರೀನಿವಾಸಪುರ ಪುರ ಪ್ರವೇಶ ಮಾಡಲಿದ್ದಾರೆ ಅವರನ್ನು ವೇದಘೋಷ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಮಾಡಲಿರುವುದಾಗಿ ವಿಪ್ರ ಸಂಘದ ದಿವಾಕರ್ ಮತ್ತು ಶಂಕರಮಠದ ಮೇನೆಜರ್ ಶ್ರೀನಿವಾಸನ್ ತಿಳಿಸಿರುತ್ತಾರೆ.
ಸೋಮವಾರ ಸಂಜೆ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳಿಗೆ ಶಂಕರ ಮಠದಲ್ಲಿ ಪಾದುಕ ಪೂಜೆ ಫಲ ಸಮರ್ಪಣೆ ಅದ ನಂತರ ಗುರುಗಳಿಂದ ಅನುಗ್ರಹ ಭಾಷಣ ಮತ್ತು ಶ್ರೀ ಚಂದ್ರಮೌಳೇಶ್ವರ ಪೂಜಾ ಅನುಷ್ಠಾನ ಇರುತ್ತದೆ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮಗಳ ನಡೆಯಲಿದ್ದು ಬುಧವಾರ ಶ್ರೀ ಗಳಿಂದ ಗುರು ದತ್ತಾತ್ರೇಯ ಆದಿ ಶಂಕರಾಚಾರ್ಯ,ಗಾಯಿತ್ರಿ ಮಹಾ ಪೂಜೆ ಹಾಗು ನವ ಚಂಡಿ ಮತ್ತು ರುದ್ರ ಹೋಮ ಪೂರ್ಣಾಹುತಿ ಆದ ನಂತರ ಶ್ರೀ ಶಂಕರ ಮಠದ ವಿಮಾನಗೋಪುರದ ಕುಂಭಾಭಿಷೇಕ ಸಾರ್ವಜನಿಕರಿಗೆ ಶ್ರೀ ಗಳ ದರ್ಶನ ಮತ್ತು ಫಲಮಂತ್ರಾಕ್ಷತೆ ಕಾರ್ಯ ನಡೆಯಲಿದೆ ಎಂದು ತಿಳಿಸಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



