ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನೆವೇರಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಲೋಕಕಲ್ಯಾಣಾರ್ಥ ವಿಜಯಿ ಯಾತ್ರೆಯಲ್ಲಿರುವ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ಸೋಮವಾರ ಸಂಜೆ 5 ಗಂಟೆಗೆ ಶ್ರೀನಿವಾಸಪುರ ಪುರ ಪ್ರವೇಶ ಮಾಡಲಿದ್ದಾರೆ ಅವರನ್ನು ವೇದಘೋಷ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಮಾಡಲಿರುವುದಾಗಿ ವಿಪ್ರ ಸಂಘದ ದಿವಾಕರ್ ಮತ್ತು ಶಂಕರಮಠದ ಮೇನೆಜರ್ ಶ್ರೀನಿವಾಸನ್ ತಿಳಿಸಿರುತ್ತಾರೆ.
ಸೋಮವಾರ ಸಂಜೆ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳಿಗೆ ಶಂಕರ ಮಠದಲ್ಲಿ ಪಾದುಕ ಪೂಜೆ ಫಲ ಸಮರ್ಪಣೆ ಅದ ನಂತರ ಗುರುಗಳಿಂದ ಅನುಗ್ರಹ ಭಾಷಣ ಮತ್ತು ಶ್ರೀ ಚಂದ್ರಮೌಳೇಶ್ವರ ಪೂಜಾ ಅನುಷ್ಠಾನ ಇರುತ್ತದೆ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮಗಳ ನಡೆಯಲಿದ್ದು ಬುಧವಾರ ಶ್ರೀ ಗಳಿಂದ ಗುರು ದತ್ತಾತ್ರೇಯ ಆದಿ ಶಂಕರಾಚಾರ್ಯ,ಗಾಯಿತ್ರಿ ಮಹಾ ಪೂಜೆ ಹಾಗು ನವ ಚಂಡಿ ಮತ್ತು ರುದ್ರ ಹೋಮ ಪೂರ್ಣಾಹುತಿ ಆದ ನಂತರ ಶ್ರೀ ಶಂಕರ ಮಠದ ವಿಮಾನಗೋಪುರದ ಕುಂಭಾಭಿಷೇಕ ಸಾರ್ವಜನಿಕರಿಗೆ ಶ್ರೀ ಗಳ ದರ್ಶನ ಮತ್ತು ಫಲಮಂತ್ರಾಕ್ಷತೆ ಕಾರ್ಯ ನಡೆಯಲಿದೆ ಎಂದು ತಿಳಿಸಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



