ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನೆವೇರಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಲೋಕಕಲ್ಯಾಣಾರ್ಥ ವಿಜಯಿ ಯಾತ್ರೆಯಲ್ಲಿರುವ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ಸೋಮವಾರ ಸಂಜೆ 5 ಗಂಟೆಗೆ ಶ್ರೀನಿವಾಸಪುರ ಪುರ ಪ್ರವೇಶ ಮಾಡಲಿದ್ದಾರೆ ಅವರನ್ನು ವೇದಘೋಷ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಮಾಡಲಿರುವುದಾಗಿ ವಿಪ್ರ ಸಂಘದ ದಿವಾಕರ್ ಮತ್ತು ಶಂಕರಮಠದ ಮೇನೆಜರ್ ಶ್ರೀನಿವಾಸನ್ ತಿಳಿಸಿರುತ್ತಾರೆ.
ಸೋಮವಾರ ಸಂಜೆ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳಿಗೆ ಶಂಕರ ಮಠದಲ್ಲಿ ಪಾದುಕ ಪೂಜೆ ಫಲ ಸಮರ್ಪಣೆ ಅದ ನಂತರ ಗುರುಗಳಿಂದ ಅನುಗ್ರಹ ಭಾಷಣ ಮತ್ತು ಶ್ರೀ ಚಂದ್ರಮೌಳೇಶ್ವರ ಪೂಜಾ ಅನುಷ್ಠಾನ ಇರುತ್ತದೆ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮಗಳ ನಡೆಯಲಿದ್ದು ಬುಧವಾರ ಶ್ರೀ ಗಳಿಂದ ಗುರು ದತ್ತಾತ್ರೇಯ ಆದಿ ಶಂಕರಾಚಾರ್ಯ,ಗಾಯಿತ್ರಿ ಮಹಾ ಪೂಜೆ ಹಾಗು ನವ ಚಂಡಿ ಮತ್ತು ರುದ್ರ ಹೋಮ ಪೂರ್ಣಾಹುತಿ ಆದ ನಂತರ ಶ್ರೀ ಶಂಕರ ಮಠದ ವಿಮಾನಗೋಪುರದ ಕುಂಭಾಭಿಷೇಕ ಸಾರ್ವಜನಿಕರಿಗೆ ಶ್ರೀ ಗಳ ದರ್ಶನ ಮತ್ತು ಫಲಮಂತ್ರಾಕ್ಷತೆ ಕಾರ್ಯ ನಡೆಯಲಿದೆ ಎಂದು ತಿಳಿಸಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



