ಶ್ರೀನಿವಾಸಪುರ: ಕಾಂಗ್ರೆಸ್ ಮುಖಂಡ ದಲಿತ ನಾಯಕ ಶ್ರೀನಿವಾಸನ್ ಕೊಲೆ ಆರೋಪದಲ್ಲಿ ಬಂದಿತರಾಗಿರುವಂತ ವ್ಯಕ್ತಿಗಳ ಸಂಬಂಧಿಕರು ಜಗಜೀವನ ಪಾಳ್ಯದಲ್ಲಿ ನಮ್ಮೊಂದಿಗೆ ವಾಸಿಸುವುದು ಬೇಡ ಎಂದು ಜಗಜೀವನ ಪಾಳ್ಯ ಮತ್ತು ದಯಾನಂದ ರಸ್ತೆ ನಿವಾಸಿಗರು ಪೋಲಿಸರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿರುತ್ತಾರೆ.
ಶ್ರೀನಿವಾಸನ್ ಅವರ ಕೊಲೆ ಆರೋಪದಲ್ಲಿ ಬಂದಿತರಾಗಿರುವ ವ್ಯಕ್ತಿಗಳ ಕುಟುಂಬಗಳ ಸದಸ್ಯರು ಹಾಗು ಬಂಧುಗಳು ಕೊಲೆಯಾದ ನಂತರದಲ್ಲಿ ಪರಾರಿಯಾಗಿದ್ದರು ದಿನಗಳದಂತೆ ಇತ್ತಿಚಿಗೆ ಕೆಲವರು ಒಬ್ಬೊಬ್ಬರಾಗಿ ಬರುತ್ತಿದ್ದು ಅವರಿಂದ ವಾರ್ಡ್ ನಂ 20 ರ ಜಗಜೀವನ ಪಾಳ್ಯ ಮತ್ತು ದಯಾನಂದ ರಸ್ತೆಯ ಜನರ ನಡುವೆ ಸೌಹಾರ್ದತೆ ಕದಡುತ್ತದೆ ಮತ್ತು ಕೊಲೆ ಕುರಿತಂತೆ ಪ್ರತ್ಯಕ್ಷ ಸಾಕ್ಷಿ ಗಳಿಗೆ ಮತ್ತು ಅವರ ಸಂಬಂಧಿಕರಿಗೆ ಅಪಾಯ ಆಗುವಂತ ಆತಂಕದ ಪರಿಸ್ಥಿತಿ ಏರ್ಪಡುತ್ತಿದ್ದು ಕೊಲೆ ಆರೋಪಿಯ ಸಂಬಂದಿಕರು ಜಗಜೀವನ ಪಾಳ್ಯ ಹಾಗೂ ದಯಾನಂದ ಭಾಗದಲ್ಲಿ ಬರುವುದು ಒಡಾಡುವುದು ಬೇಡ ಮತ್ತು ಅವರು ಇಲ್ಲಿ ಇರಲು ಅವಕಾಶ ಮಾಡಿಕೊಡಬಾರದು ಈ ಬಗ್ಗೆ ಪೋಲಿಸರು ಮದ್ಯಸ್ಥಿಕೆ ವಹಿಸಿ ಅವರಿಗೆ ತಿಳುವಳಿಕೆ ಮೂಡಿಸಬೇಕು ಎಂದು ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ಪೊಲೀಸ್ ಠಾಣೆಯ ಮುಂದೆ ವಾರ್ಡ್ ನಂ 20 ಭಾಗದ ನಿವಾಸಿಗಳು ಮನವಿ ಪತ್ರವನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ವಾರ್ಡ್ ನಿವಾಸಿಗಳಾದ ಅಮರ್, ರಾಜೇಶ್, ಸುಬ್ರಮಣಿ, ಚೆನ್ನಪ್ಪ, ಮುಳಿಯಗಳಪ್ಪ, ತಿಪ್ಪಣ್ಣ, ನಾಗರಾಜ, ನಾಗೇಶ್, ಅಂಬರೀಶ್, ಪದ್ಮ, ರೂಪಶ್ರೀ,ಮಣಿಮಾಲ,ಸೀತಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27