ಶ್ರೀನಿವಾಸಪುರ: ನಾವು ಮಾಡಿರುವಂತ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಯಾರೆ ಸೇರ್ಪಡೆಯಾದರೂ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇನೆ ಪಕ್ಷದಲ್ಲಿ ಅವರನ್ನು ಗೌರವಿತವಾಗಿ ನಡೆಸಿಕೊಳ್ಳುತ್ತೇವೆ ಎಂದು ಶಾಸಕ ರಮೇಶ್ ಕುಮಾರ್ ಹೇಳಿದರು ಅವರು ಇಂದು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸೇರ್ಪಡೆಮಾಡಿಕೊಂಡು ಮಾತನಾಡಿದರು.
ಯಾವುದೇ ಅಧಿಕಾರದ ಆಮಿಷ ಷರತ್ತುಗಳನ್ನು ವಿಧಿಸದೆ ಪಕ್ಷಕ್ಕೆ ಬಂದಿರುವ ಅವರು ನಮ್ಮ ಜನಪರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಹೆಣ್ಣುಮಗಳು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಆತ್ಮಿಯವಾಗಿ ಸ್ವಾಗತ ಕೋರಿದ್ದೇನೆ ಆಕೆಗೆ ನಮ್ಮ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಸಹಕಾರ ನೀಡುವ ಮೂಲಕ ಆಕೆಯನ್ನು ಬೆಂಬಲಿಸೋಣ ಎಂದರು.
ಪಟ್ಟಣದ ಅಭಿವೃದ್ದಿಗೆ ವಿಶೇಷವಾಗಿ ಚಿಂತನೆ ಮಾಡುತ್ತಿದ್ದೇನೆ ಪಟ್ಟಣದಲ್ಲಿ ರವಿಂದ್ರ ಕಲಾಕ್ಷೇತ್ರ ದಂತ ಸಾಂಸೃತಿಕ ಭವನ ನಿರ್ಮಿಸುವ ಉದ್ದೇಶ ಹೊಂದಿದ್ದು ಇದಕ್ಕಾಗಿ ಗೌರಿಬಿದನೂರಿನಲ್ಲಿರುವ ಕಲಾಭವನ ಮಾದರಿಯಲ್ಲಿ ವಿಶಾಲವಾದ ಭವನ ನಿರ್ಮಿಸುವುದಾಗಿ ಹೇಳಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಮಾತನಾಡಿ ಶಾಸಕ ರಮೇಶ್ ಕುಮಾರ್ ಅವರ ಪ್ರಗತಿಪರ ಚಿಂತನೆ ಹಾಗು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದ ಅವರು ಪುರಸಭೆ ಅಧ್ಯಕ್ಷೆಯಾಗಿ ಒಂದುವರೆ ವರ್ಷದಿಂದ ಉತ್ತಮ ಆಡಳಿತ ನೀಡುತ್ತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಯಾವುದೇ ಬ್ರಷ್ಟಾಚಾರದ ಆರೋಪ ನನ್ನ ಮೇಲೆ ಇಲ್ಲ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ತಮ್ಮ ರಾಜಕೀಯ ಪ್ರತಿಷ್ಠೆಗೆ ನಮ್ಮನ್ನು ಬಳಸಿಕೊಂಡರು ನಂತರ ನನ್ನನ್ನು ಅಧಿಕಾರದಿಂದ ಇಳಿಸುವಂತ ಕಾರ್ಯತಂತ್ರ ರೂಪಿಸಿ ನನ್ನ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಹೊರೆಸುತ್ತಿದ್ದಾರೆ ಎಂದು ದೂರಿದ ಅವರು ಮಾಜಿ ಶಾಸಕರ ವರ್ತನೆಯಿಂದ ಮಾನಸಿಕವಾಗಿ ನೊಂದು ಜೆಡಿಎಸ್ ತೊರೆದಿರುವುದಾಗಿ ಹೇಳಿದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15