ಶ್ರೀನಿವಾಸಪುರ: ನಾವು ಮಾಡಿರುವಂತ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಯಾರೆ ಸೇರ್ಪಡೆಯಾದರೂ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇನೆ ಪಕ್ಷದಲ್ಲಿ ಅವರನ್ನು ಗೌರವಿತವಾಗಿ ನಡೆಸಿಕೊಳ್ಳುತ್ತೇವೆ ಎಂದು ಶಾಸಕ ರಮೇಶ್ ಕುಮಾರ್ ಹೇಳಿದರು ಅವರು ಇಂದು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸೇರ್ಪಡೆಮಾಡಿಕೊಂಡು ಮಾತನಾಡಿದರು.
ಯಾವುದೇ ಅಧಿಕಾರದ ಆಮಿಷ ಷರತ್ತುಗಳನ್ನು ವಿಧಿಸದೆ ಪಕ್ಷಕ್ಕೆ ಬಂದಿರುವ ಅವರು ನಮ್ಮ ಜನಪರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಹೆಣ್ಣುಮಗಳು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಆತ್ಮಿಯವಾಗಿ ಸ್ವಾಗತ ಕೋರಿದ್ದೇನೆ ಆಕೆಗೆ ನಮ್ಮ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಸಹಕಾರ ನೀಡುವ ಮೂಲಕ ಆಕೆಯನ್ನು ಬೆಂಬಲಿಸೋಣ ಎಂದರು.
ಪಟ್ಟಣದ ಅಭಿವೃದ್ದಿಗೆ ವಿಶೇಷವಾಗಿ ಚಿಂತನೆ ಮಾಡುತ್ತಿದ್ದೇನೆ ಪಟ್ಟಣದಲ್ಲಿ ರವಿಂದ್ರ ಕಲಾಕ್ಷೇತ್ರ ದಂತ ಸಾಂಸೃತಿಕ ಭವನ ನಿರ್ಮಿಸುವ ಉದ್ದೇಶ ಹೊಂದಿದ್ದು ಇದಕ್ಕಾಗಿ ಗೌರಿಬಿದನೂರಿನಲ್ಲಿರುವ ಕಲಾಭವನ ಮಾದರಿಯಲ್ಲಿ ವಿಶಾಲವಾದ ಭವನ ನಿರ್ಮಿಸುವುದಾಗಿ ಹೇಳಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಮಾತನಾಡಿ ಶಾಸಕ ರಮೇಶ್ ಕುಮಾರ್ ಅವರ ಪ್ರಗತಿಪರ ಚಿಂತನೆ ಹಾಗು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದ ಅವರು ಪುರಸಭೆ ಅಧ್ಯಕ್ಷೆಯಾಗಿ ಒಂದುವರೆ ವರ್ಷದಿಂದ ಉತ್ತಮ ಆಡಳಿತ ನೀಡುತ್ತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಯಾವುದೇ ಬ್ರಷ್ಟಾಚಾರದ ಆರೋಪ ನನ್ನ ಮೇಲೆ ಇಲ್ಲ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ತಮ್ಮ ರಾಜಕೀಯ ಪ್ರತಿಷ್ಠೆಗೆ ನಮ್ಮನ್ನು ಬಳಸಿಕೊಂಡರು ನಂತರ ನನ್ನನ್ನು ಅಧಿಕಾರದಿಂದ ಇಳಿಸುವಂತ ಕಾರ್ಯತಂತ್ರ ರೂಪಿಸಿ ನನ್ನ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಹೊರೆಸುತ್ತಿದ್ದಾರೆ ಎಂದು ದೂರಿದ ಅವರು ಮಾಜಿ ಶಾಸಕರ ವರ್ತನೆಯಿಂದ ಮಾನಸಿಕವಾಗಿ ನೊಂದು ಜೆಡಿಎಸ್ ತೊರೆದಿರುವುದಾಗಿ ಹೇಳಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



