ಶ್ರೀನಿವಾಸಪುರ: ನಾವು ಮಾಡಿರುವಂತ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಯಾರೆ ಸೇರ್ಪಡೆಯಾದರೂ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇನೆ ಪಕ್ಷದಲ್ಲಿ ಅವರನ್ನು ಗೌರವಿತವಾಗಿ ನಡೆಸಿಕೊಳ್ಳುತ್ತೇವೆ ಎಂದು ಶಾಸಕ ರಮೇಶ್ ಕುಮಾರ್ ಹೇಳಿದರು ಅವರು ಇಂದು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸೇರ್ಪಡೆಮಾಡಿಕೊಂಡು ಮಾತನಾಡಿದರು.
ಯಾವುದೇ ಅಧಿಕಾರದ ಆಮಿಷ ಷರತ್ತುಗಳನ್ನು ವಿಧಿಸದೆ ಪಕ್ಷಕ್ಕೆ ಬಂದಿರುವ ಅವರು ನಮ್ಮ ಜನಪರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಹೆಣ್ಣುಮಗಳು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಆತ್ಮಿಯವಾಗಿ ಸ್ವಾಗತ ಕೋರಿದ್ದೇನೆ ಆಕೆಗೆ ನಮ್ಮ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಸಹಕಾರ ನೀಡುವ ಮೂಲಕ ಆಕೆಯನ್ನು ಬೆಂಬಲಿಸೋಣ ಎಂದರು.
ಪಟ್ಟಣದ ಅಭಿವೃದ್ದಿಗೆ ವಿಶೇಷವಾಗಿ ಚಿಂತನೆ ಮಾಡುತ್ತಿದ್ದೇನೆ ಪಟ್ಟಣದಲ್ಲಿ ರವಿಂದ್ರ ಕಲಾಕ್ಷೇತ್ರ ದಂತ ಸಾಂಸೃತಿಕ ಭವನ ನಿರ್ಮಿಸುವ ಉದ್ದೇಶ ಹೊಂದಿದ್ದು ಇದಕ್ಕಾಗಿ ಗೌರಿಬಿದನೂರಿನಲ್ಲಿರುವ ಕಲಾಭವನ ಮಾದರಿಯಲ್ಲಿ ವಿಶಾಲವಾದ ಭವನ ನಿರ್ಮಿಸುವುದಾಗಿ ಹೇಳಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಮಾತನಾಡಿ ಶಾಸಕ ರಮೇಶ್ ಕುಮಾರ್ ಅವರ ಪ್ರಗತಿಪರ ಚಿಂತನೆ ಹಾಗು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದ ಅವರು ಪುರಸಭೆ ಅಧ್ಯಕ್ಷೆಯಾಗಿ ಒಂದುವರೆ ವರ್ಷದಿಂದ ಉತ್ತಮ ಆಡಳಿತ ನೀಡುತ್ತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಯಾವುದೇ ಬ್ರಷ್ಟಾಚಾರದ ಆರೋಪ ನನ್ನ ಮೇಲೆ ಇಲ್ಲ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ತಮ್ಮ ರಾಜಕೀಯ ಪ್ರತಿಷ್ಠೆಗೆ ನಮ್ಮನ್ನು ಬಳಸಿಕೊಂಡರು ನಂತರ ನನ್ನನ್ನು ಅಧಿಕಾರದಿಂದ ಇಳಿಸುವಂತ ಕಾರ್ಯತಂತ್ರ ರೂಪಿಸಿ ನನ್ನ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಹೊರೆಸುತ್ತಿದ್ದಾರೆ ಎಂದು ದೂರಿದ ಅವರು ಮಾಜಿ ಶಾಸಕರ ವರ್ತನೆಯಿಂದ ಮಾನಸಿಕವಾಗಿ ನೊಂದು ಜೆಡಿಎಸ್ ತೊರೆದಿರುವುದಾಗಿ ಹೇಳಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



