ಶ್ರೀನಿವಾಸಪುರ: ಪಟ್ಟಣದ ವೆಂಕಟೇಶ್ವರ ಬಡಾವಣೆಯಲ್ಲಿ ಆಚರಿಸಲಾಗಿತ್ತಿದ್ದ ಗಣೇಶೋತ್ಸವಕ್ಕೆ ಈ ವರ್ಷ 25 ನೇ ವರ್ಷದ ಸಂಭ್ರಮ,ನಿನ್ನೆ ಮೊನ್ನೆ ಕಾಲಿ ನಿವೇಶನಗಳಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ಹೆಸರಿನಲ್ಲಿ ಗಣೇಶ ಕೂರಿಸಿ ಉತ್ಸವ ಆಚರಿಸುತ್ತಿದ್ದ ಮಾಜಿ ಪುರಸಭೆ ಸದಸ್ಯ ಕೆ.ವಿ.ಮಂಜು ಮತ್ತು ಯುವ ಸ್ನೇಹಿತರ ತಂಡ ಕಾರ್ಯಕ್ಕೆ ಇವತ್ತು ಇಪ್ಪತೈದು ವಸಂತಗಳ ಬೆಳ್ಳಿಹಬ್ಬದ ಸಂಭ್ರದಲ್ಲಿ ರಜತ ಮಹೋತ್ಸವ ಆಚರಿಸುತ್ತಿದೆ, ಈ ಬಾರಿ ಸುಮಾರು 14 ಅಡಿ ಎತ್ತರದ ಬಾರಿ ಗಾತ್ರದ ದರ್ಬಾರ್ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ.
ಅಂದು ಯುವಕರಷ್ಟೆ ಒಗ್ಗೂಡಿ ಪ್ರಾರಂಭಿಸಿದ ಬೆಳ್ಳಿಹಬ್ಬದ ಸಂಭ್ರಮದ ಗಣೇಶೋತ್ಸವದ ಬಹುತೇಕ ಮುಂದಾಳುಗಳು ಇಂದು ಮದ್ಯವಯಸ್ಕರಾಗಿದ್ದಾರೆ, ಇಂದಿನ ಪೀಳಿಗೆಯ ಯುವಕರ ಜೊತೆಗೂಡಿ ಮದ್ಯವಯಸ್ಕ ಮುಖಂಡರು ಆಗಸ್ಟ್ 31 ಬುಧವಾರ ಗಣೇಶ ಹಬ್ಬದ ದಿನದಂದು ಸಂಜೆ 25 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ ನೀಡಿದರು.
ಐದು ದಿನಗಳ ಗಣೇಶೋತ್ಸವ ಭಾನುವಾರ ವಿಸರ್ಜನೆ
ಐದು ದಿನಗಳ ಕಾಲ ನಡೆಯುವ ವೆಂಕಟೇಶ್ವರ ಬಡಾವಣೆ ಗಣೇಶೋತ್ಸವದಲ್ಲಿ ಪ್ರತಿದಿನ ಸಂಜೆ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ವಿಶೇಷವಾಗಿ ಎರಡನೇಯ ದಿನವಾದ ಸೆಪ್ಟೆಂಬರ್ 1 ಗುರುವಾರ ವೆಂಕಟೇಶ್ವರ ಬಡಾವಣೆಯ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಹಿರಿಯ ನಾಗರಿಗೆ ಗೌರವ ಸಮರ್ಪಣೆ ಏರ್ಪಡಿಸಿದೆ ನಾಲ್ಕನೇ ದಿನವಾದ ಶನಿವಾರ ಕಳೆದ ಇಪತೈದು ವರ್ಷಗಳಿಂದ ಗಣೇಶೋತ್ಸವದಲ್ಲಿ ಸೇವಾಬಾವನೆಯಿಂದ ಪೂಜಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಅರ್ಚಕ ದಿನೇಶ್ ಕುಮಾರ್ ಅವರಿಗೆ ಸನ್ಮಾನ ಮತ್ತು ಐದನೇಯ ದಿನವಾದ ಭಾನುವಾರ ಗಣೇಶಮೊರ್ತಿಯ ಭವ್ಯ ಶೋಭಾಯಾತ್ರೆಯೊಂದಿಗೆ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಪ್ರಮುಖ ರೂವಾರಿ ಮಾಜಿ ಪುರಸಭೆ ಸದಸ್ಯ ಕೆ.ವಿ.ಮಂಜು ತಿಳಿಸಿದ್ದಾರೆ.
25 ನೇ ವರ್ಷದ ಗಣೇಶೋತ್ಸವಕ್ಕೆ ಸ್ಥಳೀಯವಾಗಿ ಪ್ರಮುಖದಾನಿಗಳಾದ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಆಶೋಕ್,ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್,ವೆಂಕಟೇಶ್ವರ ನರ್ಸಿಂಗ್ ಹೋಂ ಡಾ.ವೆಂಕಟಾಚಲ,ಕೃಷ್ಣಾ ಸೀಡ್ಸ್ ಮಾಲಿಕ ಕೋಟೇಶ್,ಬಿಂದು ಟ್ರೆಡರ್ಸ್ ಮಾಲಿಕ ಹನುಮಂತರೆಡ್ಡಿ ಮಕ್ಕಳು,ಸುಗುಣ ಸೀಡ್ಸ್ ಮಾಲಿಕ ಎಂ.ಚಂದ್ರಣ್ಣ,ಇವರೊಂದಿಗೆ ಚಿರಾಗ್ ರಸ್ಟೋರಂಟ್ ಮಾಲಿಕ ಚಿರಾಗ್,ಪಿ.ವಿ.ವಿನೋದ್, ನಿವೃತ್ತ ಕಂದಾಯಧಿಕಾರಿ ಮಗ ಉಪಾದ್ಯಾಯ ಪದ್ಮನಾಭಾಚಾರಿ, ಯುವ ಮುಖಂಡ ದಿಂಬಾಲಹರ್ಷ,ಚೌಡೇಶ್ವರಿ ಎಲೆಕ್ಟ್ರಿಕಲ್ಸ್ ಮಾಲಿಕ ಬಾಬುರೆಡ್ದಿ,ಯುವ ಮುಖಂಡ ಗೊಲ್ಲಪಲ್ಲಿ ಪ್ರಸನ್ನಕುಮಾರ್, ವರುಣ್ ಲೋಕನಾಥ್, ವಿನಯ್ ಪ್ರಶಾಂತ್ ಸಹಕಾರ ನೀಡಿರುವ ಬಗ್ಗೆ ಪ್ರಕಟಿಸಲಾಗಿದೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27