ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡೆದ ಕಾರಿಗೆ ಬೆಂಕಿ ತಗುಲಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ನಡೆದಿದೆ.
ಬೆಂಕಿ ಅವಘಡಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 4 ಸದಸ್ಯರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂಧ್ರಪ್ರದೇಶದ ಕಡಪದ ಕುಟುಂಬವೊಂದು ಕರ್ನಾಟಕ ನೊಂದಣಿ ಹೊಂದಿರುವ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿತ್ತು ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ಬರುತ್ತಿದ್ದಂತೆ ತಿರುವಿನಲ್ಲಿ ಕಾರಿನ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿದೆ ರಸ್ತೆ ಬದಿಯಲ್ಲಿನ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡದಿದ್ದು ಕಾರಿನ ಇಂಜಿನ್ ನಲ್ಲಿ ಬೆಂಕಿಹೊತ್ತಿಕೊಂಡಿದೆ ತಕ್ಷಣ ಕಾರಿನಲಿದ್ದ ಕುಟುಂಬಸ್ಥರು ಕಾರಿನಿಂದ ಇಳಿದು ಪ್ರಾಣಗಳನ್ನು ಉಳಿಸಿಕೊಂಡಿದ್ದಾರೆ.
ಕಾರು ಸಿಎನ್ಜಿ-ಪೆಟ್ರೋಲ್ ಆದ ಕಾರಣ ಬೆಂಕಿ ನಂದಿಸಲು ಸಾರ್ವಜನಿಕರು ಹಿಂದೇಟು ಹಾಕಿದ ಹಾಕಿದ ಕಾರಣ ಬೆಂಕಿ ಸಿ.ಎನ್.ಜಿ ಟ್ಯಾಂಕಿಗೆ ಬೆಂಕಿ ತಗುಲಿದರೆ ದೊಡ್ಡ ಮಟ್ಟದ ಅನಾಹುತ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ 30 ನಿಮಿಷಕ್ಕೂ ಹೆಚ್ಚು ಕಾಲ ರಸ್ತೆ ಸಂಪರ್ಕವನ್ನು ರಾಯಲ್ಪಾಡು ಪೊಲೀಸರು ಬಂದ್ ಮಾಡಿಸಿದ್ದರು. ಶ್ರೀನಿವಾಸಪುರ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಿದ ನಂತರ ವಾಹನ ಸಂಚಾರಕ್ಕೆ ಪೋಲಿಸರು ಅನುಮತಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



