ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡೆದ ಕಾರಿಗೆ ಬೆಂಕಿ ತಗುಲಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ನಡೆದಿದೆ.
ಬೆಂಕಿ ಅವಘಡಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 4 ಸದಸ್ಯರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂಧ್ರಪ್ರದೇಶದ ಕಡಪದ ಕುಟುಂಬವೊಂದು ಕರ್ನಾಟಕ ನೊಂದಣಿ ಹೊಂದಿರುವ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿತ್ತು ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ಬರುತ್ತಿದ್ದಂತೆ ತಿರುವಿನಲ್ಲಿ ಕಾರಿನ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿದೆ ರಸ್ತೆ ಬದಿಯಲ್ಲಿನ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡದಿದ್ದು ಕಾರಿನ ಇಂಜಿನ್ ನಲ್ಲಿ ಬೆಂಕಿಹೊತ್ತಿಕೊಂಡಿದೆ ತಕ್ಷಣ ಕಾರಿನಲಿದ್ದ ಕುಟುಂಬಸ್ಥರು ಕಾರಿನಿಂದ ಇಳಿದು ಪ್ರಾಣಗಳನ್ನು ಉಳಿಸಿಕೊಂಡಿದ್ದಾರೆ.
ಕಾರು ಸಿಎನ್ಜಿ-ಪೆಟ್ರೋಲ್ ಆದ ಕಾರಣ ಬೆಂಕಿ ನಂದಿಸಲು ಸಾರ್ವಜನಿಕರು ಹಿಂದೇಟು ಹಾಕಿದ ಹಾಕಿದ ಕಾರಣ ಬೆಂಕಿ ಸಿ.ಎನ್.ಜಿ ಟ್ಯಾಂಕಿಗೆ ಬೆಂಕಿ ತಗುಲಿದರೆ ದೊಡ್ಡ ಮಟ್ಟದ ಅನಾಹುತ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ 30 ನಿಮಿಷಕ್ಕೂ ಹೆಚ್ಚು ಕಾಲ ರಸ್ತೆ ಸಂಪರ್ಕವನ್ನು ರಾಯಲ್ಪಾಡು ಪೊಲೀಸರು ಬಂದ್ ಮಾಡಿಸಿದ್ದರು. ಶ್ರೀನಿವಾಸಪುರ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಿದ ನಂತರ ವಾಹನ ಸಂಚಾರಕ್ಕೆ ಪೋಲಿಸರು ಅನುಮತಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27