ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡೆದ ಕಾರಿಗೆ ಬೆಂಕಿ ತಗುಲಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ನಡೆದಿದೆ.
ಬೆಂಕಿ ಅವಘಡಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 4 ಸದಸ್ಯರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂಧ್ರಪ್ರದೇಶದ ಕಡಪದ ಕುಟುಂಬವೊಂದು ಕರ್ನಾಟಕ ನೊಂದಣಿ ಹೊಂದಿರುವ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿತ್ತು ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ಬರುತ್ತಿದ್ದಂತೆ ತಿರುವಿನಲ್ಲಿ ಕಾರಿನ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿದೆ ರಸ್ತೆ ಬದಿಯಲ್ಲಿನ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡದಿದ್ದು ಕಾರಿನ ಇಂಜಿನ್ ನಲ್ಲಿ ಬೆಂಕಿಹೊತ್ತಿಕೊಂಡಿದೆ ತಕ್ಷಣ ಕಾರಿನಲಿದ್ದ ಕುಟುಂಬಸ್ಥರು ಕಾರಿನಿಂದ ಇಳಿದು ಪ್ರಾಣಗಳನ್ನು ಉಳಿಸಿಕೊಂಡಿದ್ದಾರೆ.
ಕಾರು ಸಿಎನ್ಜಿ-ಪೆಟ್ರೋಲ್ ಆದ ಕಾರಣ ಬೆಂಕಿ ನಂದಿಸಲು ಸಾರ್ವಜನಿಕರು ಹಿಂದೇಟು ಹಾಕಿದ ಹಾಕಿದ ಕಾರಣ ಬೆಂಕಿ ಸಿ.ಎನ್.ಜಿ ಟ್ಯಾಂಕಿಗೆ ಬೆಂಕಿ ತಗುಲಿದರೆ ದೊಡ್ಡ ಮಟ್ಟದ ಅನಾಹುತ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ 30 ನಿಮಿಷಕ್ಕೂ ಹೆಚ್ಚು ಕಾಲ ರಸ್ತೆ ಸಂಪರ್ಕವನ್ನು ರಾಯಲ್ಪಾಡು ಪೊಲೀಸರು ಬಂದ್ ಮಾಡಿಸಿದ್ದರು. ಶ್ರೀನಿವಾಸಪುರ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಿದ ನಂತರ ವಾಹನ ಸಂಚಾರಕ್ಕೆ ಪೋಲಿಸರು ಅನುಮತಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



