ಶ್ರೀನಿವಾಸಪುರ: ಕೋಲಾರ ಹಾಲು ಒಕ್ಕೂಟದ ಶೀಬಿರದ ಕಚೇರಿ ನಿರ್ಮಾಣಕ್ಕೆ ನಿವೇಶನ ಖರೀದಿ ವಿಚಾರದಲ್ಲಿ ಯಾವುದೆ ಅವ್ಯವಹಾರ ಅಥವ ಅಕ್ರಮ ನಡೆದಿಲ್ಲ ಎಲ್ಲವೂ ನಿಯಮಾವಳಿಗಳಂತೆ ಕಾನೂನಾತ್ಮಕವಾಗಿ ಪಾರದರ್ಶಕತೆಯಿಂದ ನಡೆದಿದೆ ಎಂದು ಕೋಲಾರ ಹಾಲು ಒಕ್ಕೂಟದ ನಿರ್ದೇಶಕ ಹನುಮೇಶ್ ಹೇಳಿದರು ಇಂದು ಪಿಎಲ್ಡಿ ಬ್ಯಾಂಕ್ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ
ಕೋಲಾರ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಪಾಳ್ಯಂ ಭೈರಾರೆಡ್ದಿ ಆರೋಪಿಸಿರುವಂತೆ ಏನು ಅಕ್ರಮಗಳು ನಡೆದಿಲ್ಲ ಶೀಬಿರದ ಕಚೇರಿ ನಿರ್ಮಾಣಕ್ಕೆ ನಿವೇಶನ ಖರಿದಿಯಲ್ಲಿ ಎಲ್ಲವೂ ಸರ್ಕಾರಿ ನಿಯಮಾವಳಿಗಳಂತೆ ಪಾರದರ್ಶಕತೆಯನ್ನು ಪಾಲನೆ ಮಾಡಿದ್ದು ಕೋಲಾರ ಹಾಲು ಒಕ್ಕೂಟದ ಆಡಳಿತ ಮಂಡಳಿ ಅನುಮೊದನೆ ಪಡೆದ ನಂತರ ೩೦೪೦ ಚದರಡಿಯ ನಿವೇಶನ ಖರೀದಿಗೆ ಅರ್ಹ ಮಾಲಿಕರಿಂದ ಅರ್ಜಿ ಅಹ್ವಾನಿಸಿ ಡಿಸೆಂಬರ್ ತಿಂಗಳಲ್ಲಿ ಪತ್ರಿಕಾ ಪ್ರಕಟನೆ ಹೊರಡಿಸಿದ್ದು ಅದರಂತೆ ನಿಗದಿತ ದಿನಾಂಕದ ಒಳಗೆ ಆಸಕ್ತ ಮಾಲಿಕರಿಂದ ಬಂದಂತ ಅರ್ಜಿಯನ್ನು ಪರಿಗಣಿಸಿ ದಾಖಲಾತಿಗಳನ್ನು ಕಾನೂನು ತಙ್ಞರಿಂದ ಪರಶೀಲನೆ ಮಾಡಿಸಿ ಸಂಬಂದಿಸಿದ ನಿವೇಶನಕ್ಕೆ ತಕರಾರು ಇದ್ದರೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಿಸಿದ್ದು ಯಾವುದೆ ಆಕ್ಷೇಪಗಳು ಬಾರದ ಹಿನ್ನಲೆಯಲ್ಲಿ ನಿಭಂದನೆಗಳನ್ನು ಪೂರ್ಣ ಗೊಳಿಸಿದ ನಂತರ ನೊಂದಾಯಿತ ಮೌಲ್ಯಮಾಪಕರು ಸೂಚಿಸಿದಂತೆ ಪ್ರತಿ ಚದರ ಅಡಿಗೆ ೨೩೫೦ ರಿಂದ ೨೫೦೦ ರಂತೆ ವರದಿ ಪಡೆದು ದರ ನಿಷ್ಕರ್ಶೆ ಮಾಡಿ ಪ್ರತಿ ಚದರ ಅಡಿಗೆ ೨೧೯೦ ರಂತೆ ದರ ನಿಗದಿ ಮಾಡಿಸಿ ಅಂತಿಮ ಗೊಳಿಸಿ ಸಹಕಾರ ಇಲಾಖೆ ಅನುಮೊದನೆ ಸಲ್ಲಿಸಲಾಗಿದೆ.
ಇದ್ಯಾವುದರ ಮಾಹಿತಿ ಇಲ್ಲದೆ ಮಾಜಿ ನಿರ್ದೇಶಕರು ಆರೋಪ ಮಾಡಿದ್ದಾರೆ ಎಂದ ಅವರು ಈಗಾಗಲೆ ಹಾಲು ಒಕ್ಕೂಟದ ಹೆಸರಿನಲ್ಲಿ ಇರುವಂತ ಜಮೀನು ಬಗ್ಗೆ ತಿಳಿಸಿರುವಂತೆ ಪಣಸಮಾಕನಹಳ್ಳಿ ಜಮೀನು ಶ್ರೀನಿವಾಸಪುರ ಪಟ್ಟಣದಿಂದ ದೂರ ಹೊರವಲಯದಲ್ಲಿದೆ ಇದರಿಂದ ಶೀಬಿರದ ಕಚೇರಿಗೆ ನೌಕರರು ಅಧಿಕಾರಿಗಳು ಓಡಾಡಲು ಸಾಧ್ಯವಾಗುವುದಿಲ್ಲ ಜೊತೆಗೆ ಅಲ್ಲಿ ಕಾರ್ಗೆಟೆಡ್ ಬಾಕ್ಸುಗಳ ಉತ್ಪಾದನ ಘಟಕ ನಿರ್ಮಾಣದ ಯೋಜನೆ ಇದೆ ಶೀಬಿರದ ಕಚೇರಿ ನಿರ್ಮಾಣವಾದರೆ ಉತ್ಪಾದನ ಘಟಕಕ್ಕೆ ಜಾಗದ ಕೊರತೆ ಉಂಟಾಗುತ್ತದೆ ಅಮಾನಿಕೆರೆ ಬಳಿ ಇರುವ ಜಾಗದ ಕುರಿತಾಗಿ ಕೋರ್ಟನಲ್ಲಿ ದಾವೆ ಇರುವುದರಿಂದ ಅಲ್ಲಿ ಶಿಬಿರದ ಕಚೇರಿ ನಿರ್ಮಾಣ ಸಾಧ್ಯವಾಗುವುದಿಲ್ಲ ಈ ಎಲ್ಲಾ ಸಮಸ್ಯಗಳು ಇರುವುದರಿಂದ ಎಲ್ಲಾ ತಾಲೂಕುಗಳಲ್ಲಿ ಇರುವಂತೆ ನಮ್ಮ ತಾಲೂಕಿನಲ್ಲೂ ಸ್ವಂತ ಜಾಗದಲ್ಲಿ ಶೀಬಿರದ ಕಚೇರಿ ನಿರ್ಮಾಣಕ್ಕಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳ ಒತ್ತಾಸೆಯಂತೆ ಪುರಸಭೆ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡುವ ಉದ್ದೇಶ ಇರುವುದಾಗಿ ಹೇಳಿದರು.
ಸುದ್ಧಿಗೋಷ್ಠಿಯಲ್ಲಿ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ದ್ವಾರಸಂದ್ರಮುನಿವೆಂಕಟಪ್ಪ,ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಕೇತಗಾನಹಳ್ಳಿನಾಗರಾಜ್,ಅಲಂಬಗಿರಿ ಅಯ್ಯಪ್ಪ,ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶ್ಯಾಗತ್ತೂರುಸುಧಾಕರ್,ನಾಗದೇನಹಳ್ಳಿ ಸೀತಾರಮರೆಡ್ದಿ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28