ಶ್ರೀನಿವಾಸಪುರ:ಶ್ರೀನಿವಾಸಪುರ ತಹಶೀಲ್ದಾರ್ ಅವರ ನೂತನ ಮಹೇಂದ್ರ ಜೀಪಿಗೆ ಖಾಸಗಿ ಬಸ್ ಡಿಕ್ಕಿ ಹೋಡೆದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ,
ಘಟನೆ ಕೋಲಾರ-ಶ್ರೀನಿವಾಸಪುರ ರಸ್ತೆಯ ಚೆಲ್ದಿಗಾನಹಳ್ಳಿ ಹತ್ತಿರದ ಬೈಪಾಸ್ ಬಳಿ ನಡೆದಿದ್ದು ಮಂಗಳವಾರ ಸಂಜೆ ಕೋಲಾರ ದಿಂದ ಬರುತ್ತಿದ್ದ ಷರಿಫ್ ಬಸ್ ಒವರ್ ಟೇಕ್ ಮಾಡಿಕೊಂಡು ಮುಂದೆ ಸಾಗಿರುತ್ತದೆ ಅದರ ಹಿಂದೆ ಗಾರ್ಮೇಂಟ್ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ಮುಂದೆ ನುಗ್ಗಿರುತ್ತದೆ ಅದೆ ಸಮಯಕ್ಕೆ ಶ್ರೀನಿವಾಸಪುರ ತಹಶೀಲ್ದಾರ್ ಸುಧೀಂದ್ರ ರವರು ಇದ್ದ ಮಹಿಂದ್ರಾ ಜೀಪು ಬಂದಿದ್ದು ಬಸ್ಸು ಜಿಪೀಗೆ ಡಿಕ್ಕಿ ಹೊಡೆದು ಅಪಘಾತ ಆಗಿದೆ. ಬಸ್ ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಅಪಘಾತದಿಂದ ಜೀಪು ಟಯರ್ ಬ್ಲಾಸ್ಟ್ ಆಗಿದ್ದು ವಾಹನದ ಮುಂಬಾಗ ಸ್ವಲ್ಪಮಟ್ಟಿಗೆ ಜಕಂ ಆಗಿದೆ. ಜೀಪಿನಲ್ಲಿದ್ದ ತಹಶೀಲ್ದಾರ್ ಸುಧೀಂದ್ರ ಸೇಫ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27