ಶ್ರೀನಿವಾಸಪುರ:ಶ್ರೀನಿವಾಸಪುರ ತಹಶೀಲ್ದಾರ್ ಅವರ ನೂತನ ಮಹೇಂದ್ರ ಜೀಪಿಗೆ ಖಾಸಗಿ ಬಸ್ ಡಿಕ್ಕಿ ಹೋಡೆದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ,
ಘಟನೆ ಕೋಲಾರ-ಶ್ರೀನಿವಾಸಪುರ ರಸ್ತೆಯ ಚೆಲ್ದಿಗಾನಹಳ್ಳಿ ಹತ್ತಿರದ ಬೈಪಾಸ್ ಬಳಿ ನಡೆದಿದ್ದು ಮಂಗಳವಾರ ಸಂಜೆ ಕೋಲಾರ ದಿಂದ ಬರುತ್ತಿದ್ದ ಷರಿಫ್ ಬಸ್ ಒವರ್ ಟೇಕ್ ಮಾಡಿಕೊಂಡು ಮುಂದೆ ಸಾಗಿರುತ್ತದೆ ಅದರ ಹಿಂದೆ ಗಾರ್ಮೇಂಟ್ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ಮುಂದೆ ನುಗ್ಗಿರುತ್ತದೆ ಅದೆ ಸಮಯಕ್ಕೆ ಶ್ರೀನಿವಾಸಪುರ ತಹಶೀಲ್ದಾರ್ ಸುಧೀಂದ್ರ ರವರು ಇದ್ದ ಮಹಿಂದ್ರಾ ಜೀಪು ಬಂದಿದ್ದು ಬಸ್ಸು ಜಿಪೀಗೆ ಡಿಕ್ಕಿ ಹೊಡೆದು ಅಪಘಾತ ಆಗಿದೆ. ಬಸ್ ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಅಪಘಾತದಿಂದ ಜೀಪು ಟಯರ್ ಬ್ಲಾಸ್ಟ್ ಆಗಿದ್ದು ವಾಹನದ ಮುಂಬಾಗ ಸ್ವಲ್ಪಮಟ್ಟಿಗೆ ಜಕಂ ಆಗಿದೆ. ಜೀಪಿನಲ್ಲಿದ್ದ ತಹಶೀಲ್ದಾರ್ ಸುಧೀಂದ್ರ ಸೇಫ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



