ಶ್ರೀನಿವಾಸಪುರ:ಶ್ರೀನಿವಾಸಪುರ ತಹಶೀಲ್ದಾರ್ ಅವರ ನೂತನ ಮಹೇಂದ್ರ ಜೀಪಿಗೆ ಖಾಸಗಿ ಬಸ್ ಡಿಕ್ಕಿ ಹೋಡೆದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ,
ಘಟನೆ ಕೋಲಾರ-ಶ್ರೀನಿವಾಸಪುರ ರಸ್ತೆಯ ಚೆಲ್ದಿಗಾನಹಳ್ಳಿ ಹತ್ತಿರದ ಬೈಪಾಸ್ ಬಳಿ ನಡೆದಿದ್ದು ಮಂಗಳವಾರ ಸಂಜೆ ಕೋಲಾರ ದಿಂದ ಬರುತ್ತಿದ್ದ ಷರಿಫ್ ಬಸ್ ಒವರ್ ಟೇಕ್ ಮಾಡಿಕೊಂಡು ಮುಂದೆ ಸಾಗಿರುತ್ತದೆ ಅದರ ಹಿಂದೆ ಗಾರ್ಮೇಂಟ್ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ಮುಂದೆ ನುಗ್ಗಿರುತ್ತದೆ ಅದೆ ಸಮಯಕ್ಕೆ ಶ್ರೀನಿವಾಸಪುರ ತಹಶೀಲ್ದಾರ್ ಸುಧೀಂದ್ರ ರವರು ಇದ್ದ ಮಹಿಂದ್ರಾ ಜೀಪು ಬಂದಿದ್ದು ಬಸ್ಸು ಜಿಪೀಗೆ ಡಿಕ್ಕಿ ಹೊಡೆದು ಅಪಘಾತ ಆಗಿದೆ. ಬಸ್ ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಅಪಘಾತದಿಂದ ಜೀಪು ಟಯರ್ ಬ್ಲಾಸ್ಟ್ ಆಗಿದ್ದು ವಾಹನದ ಮುಂಬಾಗ ಸ್ವಲ್ಪಮಟ್ಟಿಗೆ ಜಕಂ ಆಗಿದೆ. ಜೀಪಿನಲ್ಲಿದ್ದ ತಹಶೀಲ್ದಾರ್ ಸುಧೀಂದ್ರ ಸೇಫ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



