ಶ್ರೀನಿವಾಸಪುರ:ಶ್ರೀನಿವಾಸಪುರ ತಹಶೀಲ್ದಾರ್ ಅವರ ನೂತನ ಮಹೇಂದ್ರ ಜೀಪಿಗೆ ಖಾಸಗಿ ಬಸ್ ಡಿಕ್ಕಿ ಹೋಡೆದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ,
ಘಟನೆ ಕೋಲಾರ-ಶ್ರೀನಿವಾಸಪುರ ರಸ್ತೆಯ ಚೆಲ್ದಿಗಾನಹಳ್ಳಿ ಹತ್ತಿರದ ಬೈಪಾಸ್ ಬಳಿ ನಡೆದಿದ್ದು ಮಂಗಳವಾರ ಸಂಜೆ ಕೋಲಾರ ದಿಂದ ಬರುತ್ತಿದ್ದ ಷರಿಫ್ ಬಸ್ ಒವರ್ ಟೇಕ್ ಮಾಡಿಕೊಂಡು ಮುಂದೆ ಸಾಗಿರುತ್ತದೆ ಅದರ ಹಿಂದೆ ಗಾರ್ಮೇಂಟ್ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ಮುಂದೆ ನುಗ್ಗಿರುತ್ತದೆ ಅದೆ ಸಮಯಕ್ಕೆ ಶ್ರೀನಿವಾಸಪುರ ತಹಶೀಲ್ದಾರ್ ಸುಧೀಂದ್ರ ರವರು ಇದ್ದ ಮಹಿಂದ್ರಾ ಜೀಪು ಬಂದಿದ್ದು ಬಸ್ಸು ಜಿಪೀಗೆ ಡಿಕ್ಕಿ ಹೊಡೆದು ಅಪಘಾತ ಆಗಿದೆ. ಬಸ್ ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಅಪಘಾತದಿಂದ ಜೀಪು ಟಯರ್ ಬ್ಲಾಸ್ಟ್ ಆಗಿದ್ದು ವಾಹನದ ಮುಂಬಾಗ ಸ್ವಲ್ಪಮಟ್ಟಿಗೆ ಜಕಂ ಆಗಿದೆ. ಜೀಪಿನಲ್ಲಿದ್ದ ತಹಶೀಲ್ದಾರ್ ಸುಧೀಂದ್ರ ಸೇಫ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27