ಶ್ರೀನಿವಾಸಪುರ: ಪಟ್ಟಣದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಘಟಕ(KSRTC Depo)ದಲ್ಲಿ ಸ್ಥಾಪಿಸಿದ್ದ ಗಣೇಶ ಮೂರ್ತಿಯನ್ನು ಆರು ದಿನಗಳಕಾಲ ಭಕ್ತಿಯಿಂದ ಪೂಜಿಸಿ ಭವ್ಯ ಮೆರವಣಿಗೆ ಮೂಲಕ ಕೊಂಡ್ಯೊಯ್ದು ವಿಧಿ ವಿಧಾನಗಳ ಮೂಲಕ ಶುಕ್ರವಾರ ವಿಸರ್ಜಿಸಲಾಯಿತು.
ಅರ್ಚಕರು ಗಣೇಶ ಮೂರ್ತಿಗಳಿಗೆ ವಿಧಿ ವಿಧಾನಗಳ ಮೂಲಕ ಪೂಜಾ ವಿಧಾನಗಳನ್ನು ನೆರವೇರಿಸಿದರು. ನಂತರ ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿದ ಪಲ್ಲಕಿ ರಥದಲ್ಲಿ ಗಣೇಶ ಮೂರ್ತಿಯನ್ನು ಭಕ್ತಿಭಾವದಿಂದ ಇಟ್ಟು ನಗರದ ಪ್ರಮುಖ ಸ್ಥಳಗಳಾದ ಮುಳಬಾಗಿಲು ವೃತ್ತ, ಎಂ.ಜಿ.ರಸ್ತೆ ಬಸ್ ಸ್ಟಾಂಡ್ ನಲ್ಲಿ ಇಂದಿರಾಭವನ್ ವೃತ್ತ, ಹೀಗೆ ಎಲ್ಲಾ ಕಡೆಗಳಲ್ಲೂ ಗಣೇಶನ ಉತ್ಸವಮೂರ್ತಿ ಭವ್ಯ ಮೆರವಣಿಗೆ ಸಾಗಿ ವಿಸರ್ಜನೆಗೆ ಕೊಂಡ್ಯೊಯಲಾಯಿತು.
ಡಿಜೆಗಳ ಅಬ್ಬರ ಇಲ್ಲದೆ KSRTC ನೌಕರರು ಕೇಸರಿ ಟೋಪಿ ಶಾಲು ಧರಸಿ ಡ್ರಮ್ಸ್ ಮತ್ತು ತಮಟೆ ಸದ್ದಿಗೆ ಹೆಜ್ಜೆಹಾಕಿ ನೃತ್ಯ ಮಾಡುತ್ತ ಮೆರವಣಿಗೆಯಲ್ಲಿ ಸಾಗುತ್ತ ಸಂಭ್ರಮಿಸಿದರು. ಮುಳಬಾಗಿಲು ತಾಲೂಕಿನ ವಾದ್ಯಗಾರರು ಡ್ರಮ್ಸ್ ಮತ್ತು ತಮಟೆಗಳನ್ನು ಅಚ್ಚುಕಟ್ಟಾಗಿ ಭಾರಿಸಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



