ಶ್ರೀನಿವಾಸಪುರ : KSRTC ಬಸ್ಸುಗಳನ್ನು ಮದುವೆ ರಾಜಕೀಯ ಸಮಾವವೇಶಗಳಿಗೆ ಒಪ್ಪಂದದ ಮೇರೆಗೆ
ದೊಡ್ದ ಸಂಖ್ಯೆಯಲ್ಲಿ ಬಸ್ಸುಗಳನ್ನು ಕಳೆಸುತ್ತಿರುವುದರಿಂದ, ಮಾರ್ಗದಲ್ಲಿ ರೆಗ್ಯೂಲರ್ ಆಗಿ ಒಡಾಡುತ್ತಿದ್ದ ಬಸ್ಸುಗಳಿಲ್ಲದೆ ಹಳ್ಳಿಗಾಡಿನ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಲು ಹಾಗು ಸಾರ್ವಜನಿಕರು ಪಟ್ಟಣ ಪ್ರದೇಶಗಳಿಗೆ ಒಡಾಡಲು ಪ್ರಯಾಸ ಪಡುವಂತಾಗಿದೆ ಎಂದು ಆರೋಪಿಸಿ ಕೂರಿಗೇಪಲ್ಲಿ ಮುದಿಮಡಗು ಭಾಗದ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರು ತಮ್ಮ ಗ್ರಾಮಕ್ಕೆ ಬಂದಂತ ಬಸ್ ಅನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀನಿವಾಸಪುರ ತಾಲೂಕಿನ ಬಹುತೇಕ ಗಡಿಯಂಚಿನ ಗ್ರಾಮಗಳಿಗೆ ಶ್ರೀನಿವಾಸಪುರ ಹಾಗು ಚಿಂತಾಮಣಿಯಿಂದ ಶಾಲಾ ಕಾಲೇಜು ಸಮಯಕ್ಕೆ ಬಸ್ ಗಳನ್ನು ಕೆ ಎಸ್ ಆರ್ ಟಿ ಸಿ ಒದಗಿಸಿದೆ. ಇತ್ತಿಚಿಗೆ ರಾಜಕೀಯ ಸಮಾವೇಶಗಳು ಇತರೆ ಖಾಸಗಿ ಕಾರ್ಯಕ್ರಮಗಳು ಸಬೆ ಸಮಾರಂಬಗಳಿಗೆ ತೆರಳಲು KSRTC ಸಂಸ್ಥೆ ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಳಿಸುತ್ತಿರುವ ಹಿನ್ನಲೆಯಲ್ಲಿ ರೆಗ್ಯೂಲರ್ ಆಗಿ ಒಡಾಡುವ ಮಾರ್ಗದಲ್ಲಿ ಬಸ್ ಇಲ್ಲದಂತಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುತ್ತದೆ ಜೊತೆಗೆ ಬಡ ವಿದ್ಯಾರ್ಥಿಗಳು ಪಾಸ್ ಇದ್ದರು ಇಂತಹ ಸಂದರ್ಬದಲ್ಲಿ ದುಬಾರಿ ಹಣ ತೆತ್ತು ಒಡಾಡಲು ಕಷ್ಟವಾಗುತ್ತದೆ ಎಂದು ದೂರಿದರು.
ಬಸ್ ತಡೆದ ಆಕ್ರೋಶಿತರು ಈ ಬಗ್ಗೆ ಶ್ರೀನಿವಾಸಪುರ ಘಟಕದ ವ್ಯವಸಾಪಕರಿಗೆ ಹೇಳಿದರೆ ನಿಮ್ಮಿಂದ ಬರುವಂತ ದೂರು ನಾನು ಸ್ವೀಕರಿಸಿದರೆ ನಿಮಗೆ ನನ್ನಿಂದ ಯಾವುದೇ ಉಪಯೋಗವಾಗುದಿಲ್ಲ ಎಂದು ತಲೆ ಜಾರಿಕೊಳ್ಳುತ್ತಾರೆ ಎಂಬುದು ಗ್ರಾಮಸ್ಥರ ಆರೋಪ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27