ಶ್ರೀನಿವಾಸಪುರ : KSRTC ಬಸ್ಸುಗಳನ್ನು ಮದುವೆ ರಾಜಕೀಯ ಸಮಾವವೇಶಗಳಿಗೆ ಒಪ್ಪಂದದ ಮೇರೆಗೆ
ದೊಡ್ದ ಸಂಖ್ಯೆಯಲ್ಲಿ ಬಸ್ಸುಗಳನ್ನು ಕಳೆಸುತ್ತಿರುವುದರಿಂದ, ಮಾರ್ಗದಲ್ಲಿ ರೆಗ್ಯೂಲರ್ ಆಗಿ ಒಡಾಡುತ್ತಿದ್ದ ಬಸ್ಸುಗಳಿಲ್ಲದೆ ಹಳ್ಳಿಗಾಡಿನ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಲು ಹಾಗು ಸಾರ್ವಜನಿಕರು ಪಟ್ಟಣ ಪ್ರದೇಶಗಳಿಗೆ ಒಡಾಡಲು ಪ್ರಯಾಸ ಪಡುವಂತಾಗಿದೆ ಎಂದು ಆರೋಪಿಸಿ ಕೂರಿಗೇಪಲ್ಲಿ ಮುದಿಮಡಗು ಭಾಗದ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರು ತಮ್ಮ ಗ್ರಾಮಕ್ಕೆ ಬಂದಂತ ಬಸ್ ಅನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀನಿವಾಸಪುರ ತಾಲೂಕಿನ ಬಹುತೇಕ ಗಡಿಯಂಚಿನ ಗ್ರಾಮಗಳಿಗೆ ಶ್ರೀನಿವಾಸಪುರ ಹಾಗು ಚಿಂತಾಮಣಿಯಿಂದ ಶಾಲಾ ಕಾಲೇಜು ಸಮಯಕ್ಕೆ ಬಸ್ ಗಳನ್ನು ಕೆ ಎಸ್ ಆರ್ ಟಿ ಸಿ ಒದಗಿಸಿದೆ. ಇತ್ತಿಚಿಗೆ ರಾಜಕೀಯ ಸಮಾವೇಶಗಳು ಇತರೆ ಖಾಸಗಿ ಕಾರ್ಯಕ್ರಮಗಳು ಸಬೆ ಸಮಾರಂಬಗಳಿಗೆ ತೆರಳಲು KSRTC ಸಂಸ್ಥೆ ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಳಿಸುತ್ತಿರುವ ಹಿನ್ನಲೆಯಲ್ಲಿ ರೆಗ್ಯೂಲರ್ ಆಗಿ ಒಡಾಡುವ ಮಾರ್ಗದಲ್ಲಿ ಬಸ್ ಇಲ್ಲದಂತಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುತ್ತದೆ ಜೊತೆಗೆ ಬಡ ವಿದ್ಯಾರ್ಥಿಗಳು ಪಾಸ್ ಇದ್ದರು ಇಂತಹ ಸಂದರ್ಬದಲ್ಲಿ ದುಬಾರಿ ಹಣ ತೆತ್ತು ಒಡಾಡಲು ಕಷ್ಟವಾಗುತ್ತದೆ ಎಂದು ದೂರಿದರು.
ಬಸ್ ತಡೆದ ಆಕ್ರೋಶಿತರು ಈ ಬಗ್ಗೆ ಶ್ರೀನಿವಾಸಪುರ ಘಟಕದ ವ್ಯವಸಾಪಕರಿಗೆ ಹೇಳಿದರೆ ನಿಮ್ಮಿಂದ ಬರುವಂತ ದೂರು ನಾನು ಸ್ವೀಕರಿಸಿದರೆ ನಿಮಗೆ ನನ್ನಿಂದ ಯಾವುದೇ ಉಪಯೋಗವಾಗುದಿಲ್ಲ ಎಂದು ತಲೆ ಜಾರಿಕೊಳ್ಳುತ್ತಾರೆ ಎಂಬುದು ಗ್ರಾಮಸ್ಥರ ಆರೋಪ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27