ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಯೊಬ್ಬ ತಾನು ವಾಸವಿದ್ದ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹನುಮಂತ ನಗರದಲ್ಲಿ ನಡೆದಿರುತ್ತದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಬಿಎಂಎಸ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಇಂಜಿನಿಯರಿಂಗ್ ಮೊದಲ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ಆದಿತ್ಯಾಸಿಂಗ್ (19) ಎಂದು ತಿಳಿದುಬಂದಿದೆ. ಆದಿತ್ಯ ಸಿಂಗ್ ಮೂಲತಃ ಉತ್ತರಪ್ರದೇಶ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ಅಭ್ಯಾಸ ಮಾಡುತ್ತಿದ್ದ ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಹನುಮಂತನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವಿದ್ಯಾರ್ಥಿಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮೃತದೇಹದ ಪೋಸ್ಟ್ ಮಾರ್ಟಂ ಬಳಿಕ ಪೋಷಕರಿಗೆ ಶವ ಹಸ್ತಾಂತರಿಸಿರುತ್ತಾರೆ.
ಜನವರಿಯಲ್ಲೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ!
ಕಳೆದ ಜನವರಿ 18ರಂದು ಬಿಎಂಎಸ್ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ರೆಡ್ಡಿ ಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನು. ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದು ಬಂದಿರಲಿಲ್ಲ. ಕಾಲೇಜು ಆಡಳಿತ ಮಂಡಳಿಯ ಟಾರ್ಚರ್ನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಒಂದೇ ತಿಂಗಳ ಅಂತರದಲ್ಲಿ ಎರಡನೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಈತನ ಸಾವಿಗು ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



