ಶ್ರೀನಿವಾಸಪುರ:ದೇಶದಲ್ಲಿಯೇ ಅತಿ ಹೆಚ್ಚು ಮಾವು ಬೆಳೆಯುವ ಶ್ರೀನಿವಾಸಪುರದಲ್ಲಿ ಮಾವು ಮಂಡಿಗಳು ಹಾಗು ಕೃಷಿ ಉತ್ಪನ್ನ ಮಾರುಕಟ್ಟೆ ಇರುವಂತ ಶ್ರೀನಿವಾಸಪುರ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಇದ್ದು, ಇಲ್ಲಿ ಮಾವು ರವಾನಿಸಲು ಬರುವಂತ ಬಾರಿಗಾತ್ರದ ಲಾರಿಗಳು ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಿಕೊಂಡು ಟ್ರಾಫಿಕ್ ಸಮಸ್ಯೆ ಉಂಟುಮಾಡುತ್ತಿದ್ದಾರೆ ಇದರಿಂದ ಈ ರಸ್ತೆಯಲ್ಲಿ ಅಪಘಾತಗಳಿಗೆ ಕಾರಣವಾಗುತ್ತಿದೆ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಕನ್ನಡಪರ ಸಂಘಟನೆಗಳ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಮತ್ತು ಪೋಲಿಸ್ ಇಲಾಖೆಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿರುತ್ತಾರೆ.
ಪ್ರತಿ ವರ್ಷ ಮೇ,ಜುನ್,ಜುಲೈ ತಿಂಗಳ ಅಂತ್ಯದವರಿಗೂ ಮಾವು ಕಟಾವು ಆರಂಭವಾಗುತ್ತದೆ ಅವುಗಳನ್ನು ತಂದು ಮಂಡಿಗಳಿಗೆ ಹಾಕುತ್ತಾರೆ ಸಾವಿರಾರು ಟನ್ ಮಾವನ್ನು ದೇಶದ ವಿವಿಧ ಭಾಗದ ಮಾರುಕಟ್ಟೆಗಳಿಗೆ ಸಾಗಿಸಲು ಇಲ್ಲಿಗೆ ದೇಶದ ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಾರಿಗಾತ್ರದ ಲಾರಿಗಳು ಬರುತ್ತವೆ ಇದರೊಂದಿಗೆ ಮಾವು ಪ್ಯಾಕಿಂಗ್ ವಸ್ತುಗಳ ಅಂಗಡಿಗಳು ಅಲ್ಲೆ ಪ್ರಾರಂಭಿಸುತ್ತಾರೆ ಲಾರಿ ಕಮೀಷನ್ ಆಫಿಸ್ ಗಳು,ಮಾವು ಸಾಗಿಸಲು ಕೂಲಿ ಕಾರ್ಮಿಕರು ಇದರ ಜೊತೆಗೆ ಹೊರಗಡೆಯಿಂದ ಬರುವಂತ ಲಾರಿಗಳು,ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗುತ್ತದೆ,ಇದರೊಂದಿಗೆ ಮಾವು ತಗೆದುಕೊಂಡು ಹಳ್ಳಿಗಳಿಂದ ಬರುವಂತ ಟ್ರ್ಯಾಕ್ಟರ್ ಗಳು ಇಡಿ ರಸ್ತೆ ಜನಸಂಚಾರದಿಂದ ಬಿಝಿಯಾಗಿ ಟ್ರಾಫಿಕ್ ಸಮಸ್ಯ ಉಂಟಾಗುತ್ತದೆ ಇದರಿಂದ ಇಲ್ಲಿ ಸಣ್ಣಪುಟ್ಟ ವಾಹನಗಳು ಸರಗವಾಗಿ ಸಂಚರಿಸಲು ಸಮಸ್ಯೆ ಉಂಟಾಗಿ ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದೆ ಸಾವು ನೋವುಗಳಿಗೂ ಕಾರಣವಾಗುತ್ತದೆ ಈ ಬಗ್ಗೆ ತಾಲೂಕು ಆಡಳಿತ ಪೋಲಿಸ್ ಇಲಾಖೆ ಎಚ್ಚೆತ್ತುಕೊಂಡು ಸಂಚಾರ ವ್ಯವಸ್ಥೆ ಸುಗಮ ಗೊಳಿಸಬೇಕು ಅಪಘಾತಗಳನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ಆಟೋಜಗದೀಶ್,ಸಾದಿಕ್ ಪಾಷ,ನರಸಿಂಹಮೂರ್ತಿ,ಸುಬ್ರಮಣಿ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27