ಚಿಂತಾಮಣಿ:ಚಿಂತಾಮಣಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸರ್ಕಾರಿ ನೌಕರರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಾಜ್ಯಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿಶಿವಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ಭಾಷೆ ಸಮೃದ್ಧವಾದ ಭಾಷೆ ಸಾಹಿತ್ಯದಲ್ಲಿ ಆಳವಾಗಿ ಬೇರೂರಿದೆ,ತಾಲೂಕು ಕಸಾಪ ನೂತನ ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕನ್ನಡ ಕಟ್ಟುವ ಕೆಲಸ ಮಾಡುವಂತೆ ಕರೆ ಇತ್ತರು.
ಚಿಕ್ಕಬಳ್ಳಾಪುರ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಕೋಡಿರಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ ಚಿಂತಾಮಣಿ ಸಾಹಿತ್ಯ ಲೋಕಕ್ಕೆ ಉತ್ತಮ ಸಾಹಿತಿಗಳು,ಬರಹಗಾರನ್ನು ನೀಡಿದೆ ಇದು ಹೀಗೆ ಮುಂದುವರಿಯಬೇಕು ಇದಕ್ಕಾಗಿ ಇಲ್ಲಿ ಇನ್ನೂ ಹೆಚ್ಚಿನ ರಿತಿಯಲ್ಲಿ ಕನ್ನಡದ ಕೆಲಸಗಳು ಆಗಬೇಕು ಇದಕ್ಕೆ ಶೈಕ್ಷಣಿಕ ವ್ಯವಸ್ಥೆಯ ಸಹಕಾರ ಪಡೆದು ಉತ್ತಮ ಕನ್ನಡ ಸೇವೆಯನ್ನು ನಾವೆಲ್ಲರೂ ಕೂಡಿ ಮಾಡೊಣ ಎಂದರು.
ನಿಕಟ ಪೂರ್ವ ಅಧ್ಯಕ್ಷ ಎಂ ಎ ಪ್ರಕಾಶ್ ನೂತನ ಅಧ್ಯಕ್ಷ ಶ್ರೀನಿವಾಸನ್.ಎನ್.ವಿ ಅವರಿಗೆ ಕಸಾಪ ಧ್ವಜ ಹಸ್ತಾಂತರ ಮಾಡಿ ಶುಭ ಹಾರೈಸಿದರು.ಕನ್ನಡಾಂಬೆಯ ಸೇವೆಯನ್ನು ಎಲ್ಲರೂ ಸೇರಿ ಒಗ್ಗಟ್ಟಿನಿಂದ ಮಾಡೋಣ ಇದಕ್ಕೆ ನನ್ನ ಸಹಕಾರ ಸದಾಕಾಲ ಇರುತ್ತದೆ ಎಂದರು.
ಧ್ವಜ ಸ್ವೀಕರಿಸಿ ಮಾತನಾಡಿದ ಕಸಾಪ ನೂತನ ಅಧ್ಯಕ್ಷ ಶ್ರೀನಿವಾಸನ್ ಕನ್ನಡದ ಸೇವೆ ಮಾಡಲು ಸಿಕ್ಕ ಅವಕಾಶವನ್ನು ಬಳಸಿಕೊಂಡು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಕನ್ನಡ ಕಾರ್ಯಗಳನ್ನು ಹಮ್ಮಿಕೊಂಡು ಭಾಷೆ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.ಚಿಂತಾಮಣಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವಂತೆ ಕಸಾಪ ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಿದರು.
ಚಿಂತಾಮಣಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಮುನಿರೆಡ್ಡಿ ಮಾತನಾಡಿ ತಾಲ್ಲೂಕು ಕಸಾಪಗೆ ಪೂರ್ಣ ಸಹಕಾರ. ನೀಡುವುದಾಗಿ ತಿಳಿಸಿದರು
ಕಾರ್ಯಕ್ರಮದಲ್ಲಿ ಕುಮಾರಿ ಜಾನ್ಹವಿ ಯಾದವ್ ಸ್ವಾಗತ ನೃತ್ಯ ಮಾಡಿದರು,ಕಾಗತಿ ವಿ ವೆಂಟಟರತ್ನಂ ಪ್ರಾಸ್ತಾವಿಕ ನುಡಿಗಳನ್ನು ಆಡಿದರು,ದಾಕ್ಷಾಯಣಿ ಭಜನ ಮಂಡಳಿಯವರಿಂದ ಕನ್ನಡ ಗೀತೆಗಳ ಗಾಯನ ನಡೆಯಿತು.ಲೀಲಾ ಲಕ್ಷ್ಮೀನಾರಾಯಣ್ ಪ್ರಾರ್ಥನೆ ಮಾಡಿದರು.ಎಂ ಎಸ್ ಶ್ರೀನಿವಾಸನಪ್ಪ ನಿರೂಪಿಸಿ ಪಿ ಅರ್ ವೆಂಕಟೇಶ್ ಸ್ವಾಗತಿಸಿ ಬೇಟರಾಯಪ್ಪ ವಂದಿಸಿದರು.ಈ ಸಂದರ್ಭದಲ್ಲಿ ಮುನಿಕೃಷ್ಣಪ್ಪ, ಕೆ ಎನ್ ರಮಣಾರೆಡ್ಡಿ,ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅರ್ ಮಂಜುನಾಥ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅರ್ ಅಶೋಕ್ ಕುಮಾರ್ ,ಕೆ ರವಣಪ್ಪ, ಜಿಲ್ಲಾ ಕಸಾಪದ ಪದಾಧಿಕಾರಿಗಳಾದ ಮುನಿನಾರಾಯಣಪ್ಪ, ಶಿಕ್ಷಕ ಚಲಪತಿಗೌಡ,ನಾರಾಯಣಸ್ವಾಮಿ, ವೆಂಕಟಾಚಲಪತಿ ಕುಂಟಿಗಡ್ಡೆ ಎಂ ಲಕ್ಷಣ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



