ಶ್ರೀನಿವಾಸಪುರ:ಶ್ರೀನಿವಾಸಪುರದಿಂದ ಮುಳಬಾಗಿಲುಗೆ ಹೊರಟ್ಟಿದ್ದ ಸರ್ಕಾರಿ ಬಸ್ ಗೆ ಲಾರಿಯೊಂದು ಡಿಕ್ಕಿಹೊಡೆದು ನಿಲ್ಲಿಸದೆ ವೇಗವಾಗಿ ಹೋದ ಘಟನೆ ಗುರುವಾರ ಸಂಜೆ ಶ್ರೀನಿವಾಸಪುರ ಪಟ್ಟಣದ ಮುಳಬಾಗಿಲು ವೃತ್ತದಲ್ಲಿ ನಡೆದಿರುತ್ತದೆ.
ಶ್ರೀನಿವಾಸಪುರದಿಂದ ಮುಳಬಾಗಿಲು ಕಡೆಗೆ ಹೊರಟಿದ್ದ KSRTC ಬಸ್ಸು ಹೊಸ ಬಸ್ ನಿಲ್ದಾಣದಲ್ಲಿ ಜನರನ್ನು ಹತ್ತಿಸಿಕೊಂಡು ಬರಲು ಹೋಗುತ್ತಿದ್ದಾಗ ಸಂತೆ ಮೈದಾನದ ಕಡೆಯಿಂದ ಬಂದ ತಮಿಳನಾಡು ನೊಂದಣೆಯ ಲಾರಿ ವೇಗವಾಗಿ ಬಂದು ಬಸ್ಸಿನ ಬಲಬಾಗದಲ್ಲಿ ಡಿಕ್ಕಿಹೊಡೆದಿದೆ ಇದರಿಂದ ಬಸ್ಸಿನಲ್ಲಿ ಸುಮಾರು ನಲವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದು ಕೆಲ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
KSRTC ಬಸ್ಸಿಗೆ ಡಿಕ್ಕಿಹೊಡೆದ ತಮಿಳುನಾಡು ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೆ ಮುಳಬಾಗಿಲು ಮಾರ್ಗದಲ್ಲಿ ವೇಗವಾಗಿ ಚಾಲನೆ ಮಾಡಿಕೊಂಡು ಹೋಗಿದ್ದು, ಬಸ್ ಚಾಲಕ ಸಾರ್ವಜನಿಕರ ಸಹಕಾರದೊಂದಿಗೆ ದ್ವಿಚಕ್ರ ವಾಹದಲ್ಲಿ ಹೋಗಿ ಕೇತಗಾನಹಳ್ಳಿ ಬಳಿ ಲಾರಿಯನ್ನು ಹಿಡದಿರುತ್ತಾರೆ.
ವೃತ್ತ ಇದೆ ಎಂಬ ಸೂಚನಾ ಫಲಕವಿಲ್ಲ !
ಅಪಘಾತಕ್ಕೆ ಮುಖ್ಯ ಕಾರಣ ರಾಷ್ಟ್ರೀಯ ಹೆದ್ದಾರಿ ಇಂಜನಿಯರ್ ಗಳದೆ ಎಂಬುದು ಸ್ಥಳೀಯರ ಆರೋಪ ಮುಳಬಾಗಿಲು ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ ಅಲ್ಲೆ ಕೋಲಾರ-ಹೊಸಹುಡ್ಯ ರಾಜ್ಯ ಹೆದ್ದಾರಿ ಹಾದುಹೋಗುತ್ತದೆ ಈ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಅಂತರಾಜ್ಯ ವಾಹನಗಳು ಒಡಾಡುತ್ತವೆ ಹಾಗಾಗಿ ವೃತ್ತ ಇದೆ ಎನ್ನುವ ಬಗ್ಗೆ ಕನಿಷ್ಟ ಸೂಚನ ಫಲಕ ಹಾಕುವ ಬಗ್ಗೆ ರಸ್ತೆ ಮಾಡಿದ ಇಂಜನಿಯರ್ ಗಳಿಗೆ ಹೊಳೆಯದಿರುವುದು ದುರಂತ ಎನ್ನುತ್ತಾರೆ
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26