ಶಿಕ್ಷಕಿ ವೀಣಾ ಅಮಾನತ್ತು ಮಾಡಿರುವ ಶಿಕ್ಷಣ ಇಲಾಖೆ
ಶ್ರೀನಿವಾಸಪುರ:ಶಾಲ ಶಿಕ್ಷಕರ ನಡುವೆ ಸಾಮರಸ್ಯ ಇಲ್ಲದೆ ಸರ್ಕಾರಿ ಶಾಲೆಯೊಂದು ಶೈಕ್ಷಣಿಕವಾಗಿ ಸೊರಗುತ್ತಿದೆ ಎಂದು ದಳಸನೂರು ಗ್ರಾಮಸ್ಥರು ಆರೋಪಿಸಿರುತ್ತಾರೆ. ಇಲ್ಲಿನ ಶಿಕ್ಷಕರಲ್ಲಿ ಹೊಂದಾವಣಿಕೆ ಇಲ್ಲದೆ ಸರ್ಕಾರಿ ಶಾಲೆಯಲ್ಲಿ ಒಂದೆ ದಿನ 18 ವಿಧ್ಯಾರ್ಥಿಗಳು ವರ್ಗಾವಣೆ ತಗೆದುಕೊಂಡು ಹೊಗಿದ್ದಾರೆ ಇದರಿಂದ ಶಾಲೆ ಮುಚ್ಚುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಪೋಷಕರು ಮತ್ತು ಎಸ್ ಡಿ ಎಂ ಸಿ ಆಡಳಿತ ಮಂಡಳಿ ಸದಸ್ಯರು ಕಳಕಳ ವ್ಯಕ್ತಪಡಿಸುತ್ತಿದ್ದಾರೆ.
ತಾಲೂಕಿನ ಕಸಬಾ ಹೋಬಳಿ ದಳಸನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿದ ವಿಧ್ಯಾರ್ಥಿಗಳು ಐಎ ಎಸ್, ಐಪಿಎಸ್ ಹಾಗು ಕೆ ಎ ಎಸ್ ಸೇರಿದಂತೆ ರಾಜ್ಯ ಮಟ್ಟದ ಅಧಿಕಾರಿಗಳಾಗಿದ್ದಾರೆ ಆದರೆ ಇಂದು ಶಾಲೆಯ ಪರಿಸ್ಥಿತಿ ಶೋಚನಿಯ ಮಟ್ಟ ತಲುಪಿದೆ ಎಂದು ಗ್ರಾಮಸ್ಥರು ಅಲವತ್ತುಕೊಳ್ಳುತ್ತಾರೆ.
ಹಿಂದೆಲ್ಲ ನ್ಯಾಯ ಪಂಚಾಯಿತಿ ನಡೆದಿತ್ತು
ಇಲ್ಲಿರುವ ಆರು ಮಂದಿ ಶಿಕ್ಷಕರ ನಡುವೆ ಸಾಮರಸ್ಯ ಕೊರತೆ ಇಂದು ನಿನ್ನೆಯದಲ್ಲ ಈ ಹಿಂದೆ ಹಲವಾರು ಬಾರಿ ಇಂತಹ ಪರಿಸ್ಥಿತಿ ನಿರ್ಮಾಣ ಆದಾಗ ಎಸ್.ಡಿ.ಎಂ ಸಿ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ಶಿಕ್ಷಕರನ್ನೂ ಕೂರಿಸಿ ಬುದ್ದಿವಾದ ಹೇಳಿ ಶಾಲಾ ಗೌರವ ಕಾಪಾಡುವಂತೆ ಸೂಚಿಸಿದ್ದರು ನಂತರದಲ್ಲಿ ಮತ್ತದೇ ಚಾಳಿ ಮುಂದುವರೆದಿದೆ ಎಂಬ ಆರೋಪಿಸುತ್ತಾರೆ.
ಶಿಕ್ಷಕಿ ವೀಣಾ ದುಂಡಾವರ್ತನೆ ಕಾರಣನಾ?
ಇಲ್ಲಿ ಶಿಕ್ಷಕಿಯಾಗಿರುವ ವೀಣಾ ಇತರೆ ಶಿಕ್ಷಕರೊಂದಿಗೆ ಸಾಮಾರಸ್ಯದಿಂದ ವರ್ತಿಸದೆ ಮೊಂಡುತನ ಪ್ರದರ್ಶಿಸುತ್ತಿರುವುದೆ ವಿವಾದಕ್ಕೆ ಕಾರಣವಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ, ಶಾಲ ಸಮಯದಲ್ಲಿ ಪಾಠ ಪ್ರವಚನ ಮಾಡದೆ ಶಿಕ್ಷಕಿ ವೀಣಾ ವಿದ್ಯಾರ್ಥಿಗಳ ಮುಂದೆ ಮನೆಯಿಂದ ತಂದಿರುವ ತಿಂಡಿ ತಿನಿಸು ತಿನ್ನುತ್ತ ಕೂರುವುದು ಇಲ್ಲದಿದ್ದರೆ ಏರು ಧನಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುವುದು,ಇತರೆ ಸಹದ್ಯೋಗಿ ಶಿಕ್ಷಕರೊಂದಿಗೆ ಜಗಳ ಕಾಯುವುದು ಸೇರಿದಂತೆ ಅವರ ವರ್ತನೆಯಿಂದ ಬೆಸೆತ್ತ ಶಿಕ್ಷಕರು ಶಿಕ್ಷಣ ಇಲಾಖೆಗೆ ವೈಯುಕ್ತಿಕವಾಗಿ ದೂರು ನೀಡಿದ್ದರು ಈ ಮೆರೆಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸುವಾಗ ಅವರೊಂದಿಗೂ ದೌರ್ಜನ್ಯವಾಗಿ ವರ್ತಿಸಿದ್ದರು ಈ ಹಿಂದೆ ಶಿಕ್ಷಕಿ ವೀಣಾ ತಾಲೂಕಿನ ಎದರೂರು ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇಂತಹದೆ ವರ್ತನೆಯಿಂದ 2012 ರಲ್ಲಿ ಅಮಾನತ್ ಶಿಕ್ಷೆಗೆ ಒಳಗಾಗಿದ್ದರು ನಂತರದಲ್ಲಿ ಅಮಾನತ್ ತೆರವಾದ ನಂತರ ದಳಸನೂರು ಶಾಲೆಗೆ ಬಂದರು ಅಂದಿನಿಂದಲೂ ಅವರ ನಡವಳಿಕೆ ಹೀಗೆ ಮುಂದುವರದಿದೆ ಇದಕ್ಕೆ ವಿಧ್ಯಾರ್ಥಿಗಳ ಪೋಷಕರು,ಎಸ್.ಡಿ.ಎಂ ಸಿ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸುತ್ತಾರೆ. ಶಾಲ ಶಿಕ್ಷಣ ಇಲಾಖೆ ಅಧಿಕಾರಿಗಳು ನೀಡಿರುವ ವರದಿ ಆಧರಿಸಿ ಕೋಲಾರ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಶಿಕ್ಷಕಿ ವೀಣಾ ಅವರನ್ನು ಅಮಾನತ್ತು ಮಾಡಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



