ನ್ಯೂಜ್ ಡೆಸ್ಕ್:ಮಕ್ಕಳು ಹುಟ್ಟಿದರೆ ತಂದೆ-ತಾಯಿಗಳು ಸಂಭ್ರಮಿಸುತ್ತಾರೆ ಅದರಲ್ಲೂ ಗಂಡು ಮಕ್ಕಳು ಹುಟ್ಟಿದರೆ ಅನಂದ ಪರವಶರಾಗುತ್ತಾರೆ ಗಂಡುಮಗುವಿಗೆ ಜನ್ಮ ನೀಡಿದೆ ಎಂದು ಬೀಗುತ್ತಾರೆ ಪ್ರೀತಿ ಧಾರೆ ಎರೆದು ಪೊಷಿಸುತ್ತಾರೆ. ನಂತರದಲ್ಲಿ ಗಂಡು ಮಗು ಬೆಳೆದು ದೊಡ್ಡವರಾದಂತೆ,ಹೆತ್ತವರು ಹೋರೆಯಾಗಿದ್ದಾರೇನೋ ಎಂಬಂತೆ ಕೆಲ ಮಕ್ಕಳು ವರ್ತಿಸುತ್ತಾರೆ ನಾವ್ಯಾಕೆ ಪೋಷಕರನ್ನು ಪೊಷಿಸಬೇಕು ಎಂಬ ಭಾವನೆಯಲ್ಲಿ ದುಷ್ಟ ಮಕ್ಕಳು ನಡೆದುಕೊಳ್ಳುತ್ತಾರೆ ಅಂತ ಸಾಲಿನಲ್ಲಿ ದುಷ್ಟ ಮಗನೊಬ್ಬ ತನ್ನ ಹೆಂಡತಿಯ ಮಾತು ಕೇಳಿ ತನ್ನ ವೃದ್ಧ ತಂದೆಯನ್ನು ಕರೆದುಕೊಂಡು ಹೋಗಿ ಹರಿಯುವ ನದಿ ಕಾಲುವೆಗೆ ತಳ್ಳಿ ಹತ್ಯೆ ಮಾಡಿರುವ ಹೃದಯ ವಿದ್ರಾಯಕ ಘಟನೆ ಆಂಧ್ರದ ಪಲ್ನಾಡು ಜಿಲ್ಲೆಯ ಇಪುರ್ ಮಂಡಲದಲ್ಲಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಹೇಳಿರುವಂತೆ ನದಿ ದಂಡೆ ಮೇಲೆ ಕಾರನ್ನು ನಿಲ್ಲಿಸಿದ ವ್ಯಕ್ತಿ ವೃದ್ದ ಕೊಂಡಯ್ಯನನ್ನು ಕಾರಿನಿಂದ ಹೊರತೆಗೆದು, ತನ್ನ ಕೈಗಳಿಂದ ಎತ್ತಿ ಕಾಲುವೆಗೆ ಎಸೆದಿರುತ್ತಾನೆ ಅಲ್ಲಿದ್ದ ರೈತರು ತಕ್ಷಣ ಸ್ಥಳಕ್ಕೆ ಧಾವಿಸಿ ವ್ಯಕ್ತಿಯನ್ನು ಹಿಡಿದು ಕಾಲುವೆಯಲ್ಲಿ ಬಿದ್ದ ವೃದ್ದನ ಉಳಿಸಲು ಪ್ರಯತ್ನಿಸಿದ್ದಾರೆ ಆದರೆ ಸಾಧ್ಯವಾಗಲಿಲ್ಲ ವೃದ್ಧ ಕೊಂಡಯ್ಯ ನೀರಿನಲ್ಲಿ ಮುಳುಗಿದ್ದಾರೆ ದುಷ್ಟ ಮಗನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26